May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

ಬೆಳ್ತಂಗಡಿ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ವತಿಯಿಂದ ಇನ್ನಂಜೆಯಲ್ಲಿರುವ ಕೋಳ್ಯೂರು ಕಾಂಪೌಂಡ್ ನಲ್ಲಿ ಕೋಳ್ಯೂರು ರಾಮಚಂದ್ರ ರಾಯರ 94ನೇ ಜನುಮ ದಿನದ ಅಂಗವಾಗಿ ತಾಳಮದ್ದಳೆ ಪ್ರಸಂಗ: ಶರಸೇತು ಬಂಧನ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ದಿವಾಕರ ಆಚಾರ್ಯ ಧರ್ಮಸ್ಥಳ, ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ವಾಸುದೇವ ಆಚಾರ್ಯ ಉಜಿರೆ, ರಂಜಿತ್ ಪಾಠ್ಕರ್ ಅಜೆಕಾರು ಸಹಕರಿಸಿದರು.
ಮುಮ್ಮೇಳದಲ್ಲಿ ಅರ್ಜುನನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಹನುಮಂತನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ವೃದ್ಧ ವಿಪ್ರನಾಗಿ ಶಶಿಧರ ಕನ್ಯಾಡಿ, ಶ್ರೀರಾಮನಾಗಿ ಕೋಳ್ಯೂರು ರಾಮಚಂದ್ರ ರಾಯರು ಪಾತ್ರ ನಿರ್ವಹಿಸಿದರು. ಯಕ್ಷಭಾರತಿಯ ಖಾಯಂ ಆಹ್ವಾನಿತ ಸದಸ್ಯರಾದ ಕಶ್ಯಪ್ ಕನ್ಯಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದರು.
ತಂಡದ ಪ್ರತಿ ಸದಸ್ಯರನ್ನು ಶಾಲು, ಫಲಪುಷ್ಪ, ಸ್ಮರಣಿಕೆ ನೀಡಿ ಮನೆಯವರು ಗೌರವಿಸಿದರು.

ತನ್ನ ಅದ್ಭುತ ಪ್ರತಿಭಾ ಸಾಮರ್ಥ್ಯ, ಪರಿಶ್ರಮದಿಂದ ರಂಗಸ್ಥಳದ ಬೆಳಕಾಗಿ ಅಚ್ಚಳಿಯದೇ ದಾಖಲಾದ ಶ್ರೀ ಕೋಳ್ಯೂರು ರಾಮಚಂದ್ರ ರಾಯರು ವೇಷಧಾರಿಯಾಗಿ, ಅರ್ಥಧಾರಿಯಾಗಿ ಸುಮಾರು ಏಳು ದಶಕದ ಸುದೀರ್ಘ ಅವಧಿಯಲ್ಲಿ ರಂಗದಲ್ಲಿ ಮೆರೆದ ಹಾಗೂ ಸ್ತ್ರೀ ವೇಷಗಳಿಗೆ ಮಾದರಿ ಸದೃಶರಾಗಿರುವ ಶ್ರೀಯುತರ 94 ನೇ ಜನುಮ ದಿನವನ್ನು ಮನೆಯವರು ಬಂಧು ಮಿತ್ರರೊಂದಿಗೆ ಸ್ವಗೃಹದಲ್ಲಿ ಆಚರಿಸಿಕೊಂಡರು. ಈ ಶುಭ ಸಂದರ್ಭದಲ್ಲಿ ಬಹುತೇಕ ಅವರ ಶಿಷ್ಯರೇ ಇರುವ ಯಕ್ಷಭಾರತಿ ತಂಡದಿಂದ ತಾಳಮದ್ದಳೆ ಪ್ರಸ್ತುತಿಯಾಗಿರುವುದು ಆಚರಣೆಗೆ ಮೆರುಗು ನೀಡಿತು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya
error: Content is protected !!