25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

ಬೆಳ್ತಂಗಡಿ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ವತಿಯಿಂದ ಇನ್ನಂಜೆಯಲ್ಲಿರುವ ಕೋಳ್ಯೂರು ಕಾಂಪೌಂಡ್ ನಲ್ಲಿ ಕೋಳ್ಯೂರು ರಾಮಚಂದ್ರ ರಾಯರ 94ನೇ ಜನುಮ ದಿನದ ಅಂಗವಾಗಿ ತಾಳಮದ್ದಳೆ ಪ್ರಸಂಗ: ಶರಸೇತು ಬಂಧನ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ದಿವಾಕರ ಆಚಾರ್ಯ ಧರ್ಮಸ್ಥಳ, ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ವಾಸುದೇವ ಆಚಾರ್ಯ ಉಜಿರೆ, ರಂಜಿತ್ ಪಾಠ್ಕರ್ ಅಜೆಕಾರು ಸಹಕರಿಸಿದರು.
ಮುಮ್ಮೇಳದಲ್ಲಿ ಅರ್ಜುನನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಹನುಮಂತನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ವೃದ್ಧ ವಿಪ್ರನಾಗಿ ಶಶಿಧರ ಕನ್ಯಾಡಿ, ಶ್ರೀರಾಮನಾಗಿ ಕೋಳ್ಯೂರು ರಾಮಚಂದ್ರ ರಾಯರು ಪಾತ್ರ ನಿರ್ವಹಿಸಿದರು. ಯಕ್ಷಭಾರತಿಯ ಖಾಯಂ ಆಹ್ವಾನಿತ ಸದಸ್ಯರಾದ ಕಶ್ಯಪ್ ಕನ್ಯಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದರು.
ತಂಡದ ಪ್ರತಿ ಸದಸ್ಯರನ್ನು ಶಾಲು, ಫಲಪುಷ್ಪ, ಸ್ಮರಣಿಕೆ ನೀಡಿ ಮನೆಯವರು ಗೌರವಿಸಿದರು.

ತನ್ನ ಅದ್ಭುತ ಪ್ರತಿಭಾ ಸಾಮರ್ಥ್ಯ, ಪರಿಶ್ರಮದಿಂದ ರಂಗಸ್ಥಳದ ಬೆಳಕಾಗಿ ಅಚ್ಚಳಿಯದೇ ದಾಖಲಾದ ಶ್ರೀ ಕೋಳ್ಯೂರು ರಾಮಚಂದ್ರ ರಾಯರು ವೇಷಧಾರಿಯಾಗಿ, ಅರ್ಥಧಾರಿಯಾಗಿ ಸುಮಾರು ಏಳು ದಶಕದ ಸುದೀರ್ಘ ಅವಧಿಯಲ್ಲಿ ರಂಗದಲ್ಲಿ ಮೆರೆದ ಹಾಗೂ ಸ್ತ್ರೀ ವೇಷಗಳಿಗೆ ಮಾದರಿ ಸದೃಶರಾಗಿರುವ ಶ್ರೀಯುತರ 94 ನೇ ಜನುಮ ದಿನವನ್ನು ಮನೆಯವರು ಬಂಧು ಮಿತ್ರರೊಂದಿಗೆ ಸ್ವಗೃಹದಲ್ಲಿ ಆಚರಿಸಿಕೊಂಡರು. ಈ ಶುಭ ಸಂದರ್ಭದಲ್ಲಿ ಬಹುತೇಕ ಅವರ ಶಿಷ್ಯರೇ ಇರುವ ಯಕ್ಷಭಾರತಿ ತಂಡದಿಂದ ತಾಳಮದ್ದಳೆ ಪ್ರಸ್ತುತಿಯಾಗಿರುವುದು ಆಚರಣೆಗೆ ಮೆರುಗು ನೀಡಿತು.

Related posts

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya
error: Content is protected !!