25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

ಬೆಳ್ತಂಗಡಿ:  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್‌ ವಿರುದ್ಧ ಸಲ್ಲಿಸಲಾಗಿರುವ ದೂರಿನ ಸಂಬಂಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರಿನ ರಾಜಾಜಿನಗರ ನಿವಾಸಿ ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಎಸ್ ರಾಜಶೇಖರ್ ವಾದಿಸಿದರು.

ಗಿರೀಶ್ ಮಟ್ಟಣ್ಣನವರ್ ಹೇಳಿಕೆ ವಿರುದ್ಧ 2025ರ ಆಗಸ್ಟ್ 29ರಂದು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದ ಕಾವೇರಿ ಕೇದಾರನಾಥ ನೇತೃತ್ವದ ನಿಯೋಗ ಮಟ್ಟಣ್ಣನವರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ದೂರಿನ ಸಂಬಂಧ ಮಹಿಳಾ ಆಯೋಗದಿಂದ ಈವರೆಗೆ ಯಾವುದೇ ಕ್ರಮ ಆಗದ ಕಾರಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಅರ್ಜಿದಾರರು ಸಲ್ಲಿಸಿರುವ ದೂರು ಆಧರಿಸಿ ಗಿರೀಶ್ ಮಟ್ಟಣ್ಣನವರ್ ವಿರುದ್ದ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ನ್ಯಾಯಾಲಯ ಮಹಿಳಾ ಆಯೋಗಕ್ಕೆ ನಿರ್ದೇಶನ ನೀಡಿದೆ

Related posts

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!