24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ, ಗೋ ವಧೆ ಕೇಸಿಗೆ ಸಂಬಂಧಪಡದ ಸಾರಮ್ಮ ಎಂಬವರ ಮನೆಯನ್ನು ತರಾತುರಿಯಲ್ಲಿ ಜಪ್ತಿ ಮಾಡಿ ಮಕ್ಕಳೂ ಸಹಿತ ಮನೆಯವರನ್ನು ಹೊರಹಾಕಿದ ಘಟನೆಯಲ್ಲಿ ತಪ್ಪಿತಸ್ಥ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಮುಖಂಡರು ಬೆಳ್ತಂಗಡಿ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.

ನ.10 ರಂದು ಬೆಳ್ತಂಗಡಿ ಕಚೇರಿಯಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ನೇತೃತ್ವದಲ್ಲಿ ಡಿವೈಎಸ್‌ಪಿ ಸಿ.ಕೆ ರೋಹಿಣಿ ಜೊತೆ ನಡೆದ ಮಾತುಕತೆಯಲ್ಲಿ ಕೆಲವು ವಿಚಾರಗಳನ್ನು ಅವರ ಗಮನಕ್ಕೆ ತಂದು ಮುಕ್ತವಾಗಿ ಚರ್ಚಿಸಲಾಯಿತು.

ಗೋವಧೆ ಕಾನೂನು ಉಲ್ಲಂಘನೆ ಹೆಸರಲ್ಲಿ ಒಂದು ಸಮುದಾಯವನ್ನು ಗುರಿಯಾಗಿಸಿ ಪೊಲೀಸರನ್ನು ಶುಕ್ರವಾರದ ಮಸೀದಿಯ ಪ್ರಾರ್ಥನೆಯ ಸಂದರ್ಭ ಕಳುಹಿಸಿ ಮಾಹಿತಿಯ ನೆಪದಲ್ಲಿ ಬೆದರಿಸುವಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ‌ ಬಗ್ಗೆ ಸಮುದಾಯಕ್ಕೆ ಇರುವ ಆಕ್ರೋಶವನ್ನು ನೂತನ ಡಿವೈಎಸ್‌ಪಿ ಅವರ ಗಮನಕ್ಕೆ ತರಲಾಯಿತು. ಹೊರತಾಗಿ ಪೊಲೀಸ್ ಇಲಾಖೆಗೆ ನಮ್ಮ ಸಹಕಾರ ಇರುವುದಾಗಿ ಭರವಸೆ ನೀಡಿದರು. ಇಡೀ ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಸಹಿತದ ಕಸಾಯಿ ಖಾನೆಗಳು ಇಲ್ಲದೇ ಇರುವುದರಿಂದ ಅಲ್ಲಲ್ಲಿ ಇಂತಹಾ ಅಕ್ರಮಗಳಿಗೆ ಎಡೆಯಾಗಿದೆ. ಈ‌ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಂಡು ತಾಲೂಕಿಗೊಂದು ಸಕ್ರಮ ಕಸಾಯಿಖಾನೆ ಮಂಜೂರುಗೊಳಿಸಬೇಕು.
ಅಲ್ಲಿ ನಿಯಮದ‌ ವ್ಯಾಪ್ತಿಯಲ್ಲಿ ವ್ಯವಹಾರ ನಡೆದರೆ ಯಾವುದೇ ಗೊಂದಲಗಳಿಗೆ ಅವಕಾಶವೇ ಇರುವುದಿಲ್ಲ ಎಂದು ಅಧಿಕಾರಿಗಳ ಗಮನಸೆಳೆಯಲಾಯಿತು.

ನಿಯೋಗದ ಒಟ್ಟು ವಿಚಾರಗಳ‌ ಬಗ್ಗೆ ಪ್ರತಿಕ್ರಿಯಿಸಿದ ಡಿವೈಎಸ್‌ಪಿ ಸಿ.ಕೆ ರೋಹಿಣಿ ಅವರು, ಈ ರೀತಿಯ ಪರಸ್ಪರ ಸಂವಹನ ಮಾರ್ಗದಿಂದ ಅನೇಕ ಸಮಸ್ಯೆಗಳು ಸಣ್ಣ ಮಟ್ಟದಲ್ಲೇ ಪರಿಹಾರವಾಗುತ್ತದೆ.
ನೀವು ಹೇಳಿರುವ ಅಂಶಗಳನ್ನು ಗಮನಿಸಿಕೊಂಡು ಕ್ರಮವಹಿಸಲಾಗುವುದು. ಕಾನೂನು ಸುವ್ಯವಸ್ಥೆಯ ದೃಷ್ಟಿಯಲ್ಲಿ ಒಳ್ಳೆಯ ಕೆಲಸ‌ಮಾಡಬೇಕು ಎಂಬ ಇರಾದೆಯಿಂದಲೇ ನಾನು ಇಲ್ಲಿಗೆ ಬಂದಿದ್ದೇನೆ. ಎಲ್ಲರ ಸಹಕಾರ ಪಡೆದುಕೊಂಡು ಮುಂದುವರಿಯಲಾಗುವುದು ಎಂದರು.

ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್ ಅವರ ನೇತೃತ್ವದಲ್ಲಿ ನಡೆದ ಈ‌ ಮಾತುಕತೆಯಲ್ಲಿ ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಆಲಿಕುಂಞಿ ಮುಂಡಾಜೆ, ಖಾಲಿದ್ ಪುಲಾಬೆ, ಅಬ್ದುಲ್ ರಹಿಮಾನ್ ಪಡ್ಪು, ನಿಸಾರ್ ಕುದ್ರಡ್ಕ, ನವಾಝ್ ಶರೀಫ್ ಪೆರಾಲ್ದರಕಟ್ಟೆ, ಅಝರ್ ನಾವೂರು, ಅಬ್ಬೋನು ಮದ್ದಡ್ಕ, ಕೆ.ಎಸ್ ಅಬ್ದುಲ್ಲ ಕರಾಯ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಕಟ್ಟೆ, ಸಾಲಿಹ್ ಮದ್ದಡ್ಕ ಮೊದಲಾದವರು ಭಾಗವಹಿಸಿದ್ದರು.

Related posts

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya
error: Content is protected !!