May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ, ಗೋ ವಧೆ ಕೇಸಿಗೆ ಸಂಬಂಧಪಡದ ಸಾರಮ್ಮ ಎಂಬವರ ಮನೆಯನ್ನು ತರಾತುರಿಯಲ್ಲಿ ಜಪ್ತಿ ಮಾಡಿ ಮಕ್ಕಳೂ ಸಹಿತ ಮನೆಯವರನ್ನು ಹೊರಹಾಕಿದ ಘಟನೆಯಲ್ಲಿ ತಪ್ಪಿತಸ್ಥ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಮುಖಂಡರು ಬೆಳ್ತಂಗಡಿ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.

ನ.10 ರಂದು ಬೆಳ್ತಂಗಡಿ ಕಚೇರಿಯಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ನೇತೃತ್ವದಲ್ಲಿ ಡಿವೈಎಸ್‌ಪಿ ಸಿ.ಕೆ ರೋಹಿಣಿ ಜೊತೆ ನಡೆದ ಮಾತುಕತೆಯಲ್ಲಿ ಕೆಲವು ವಿಚಾರಗಳನ್ನು ಅವರ ಗಮನಕ್ಕೆ ತಂದು ಮುಕ್ತವಾಗಿ ಚರ್ಚಿಸಲಾಯಿತು.

ಗೋವಧೆ ಕಾನೂನು ಉಲ್ಲಂಘನೆ ಹೆಸರಲ್ಲಿ ಒಂದು ಸಮುದಾಯವನ್ನು ಗುರಿಯಾಗಿಸಿ ಪೊಲೀಸರನ್ನು ಶುಕ್ರವಾರದ ಮಸೀದಿಯ ಪ್ರಾರ್ಥನೆಯ ಸಂದರ್ಭ ಕಳುಹಿಸಿ ಮಾಹಿತಿಯ ನೆಪದಲ್ಲಿ ಬೆದರಿಸುವಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ‌ ಬಗ್ಗೆ ಸಮುದಾಯಕ್ಕೆ ಇರುವ ಆಕ್ರೋಶವನ್ನು ನೂತನ ಡಿವೈಎಸ್‌ಪಿ ಅವರ ಗಮನಕ್ಕೆ ತರಲಾಯಿತು. ಹೊರತಾಗಿ ಪೊಲೀಸ್ ಇಲಾಖೆಗೆ ನಮ್ಮ ಸಹಕಾರ ಇರುವುದಾಗಿ ಭರವಸೆ ನೀಡಿದರು. ಇಡೀ ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಸಹಿತದ ಕಸಾಯಿ ಖಾನೆಗಳು ಇಲ್ಲದೇ ಇರುವುದರಿಂದ ಅಲ್ಲಲ್ಲಿ ಇಂತಹಾ ಅಕ್ರಮಗಳಿಗೆ ಎಡೆಯಾಗಿದೆ. ಈ‌ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಂಡು ತಾಲೂಕಿಗೊಂದು ಸಕ್ರಮ ಕಸಾಯಿಖಾನೆ ಮಂಜೂರುಗೊಳಿಸಬೇಕು.
ಅಲ್ಲಿ ನಿಯಮದ‌ ವ್ಯಾಪ್ತಿಯಲ್ಲಿ ವ್ಯವಹಾರ ನಡೆದರೆ ಯಾವುದೇ ಗೊಂದಲಗಳಿಗೆ ಅವಕಾಶವೇ ಇರುವುದಿಲ್ಲ ಎಂದು ಅಧಿಕಾರಿಗಳ ಗಮನಸೆಳೆಯಲಾಯಿತು.

ನಿಯೋಗದ ಒಟ್ಟು ವಿಚಾರಗಳ‌ ಬಗ್ಗೆ ಪ್ರತಿಕ್ರಿಯಿಸಿದ ಡಿವೈಎಸ್‌ಪಿ ಸಿ.ಕೆ ರೋಹಿಣಿ ಅವರು, ಈ ರೀತಿಯ ಪರಸ್ಪರ ಸಂವಹನ ಮಾರ್ಗದಿಂದ ಅನೇಕ ಸಮಸ್ಯೆಗಳು ಸಣ್ಣ ಮಟ್ಟದಲ್ಲೇ ಪರಿಹಾರವಾಗುತ್ತದೆ.
ನೀವು ಹೇಳಿರುವ ಅಂಶಗಳನ್ನು ಗಮನಿಸಿಕೊಂಡು ಕ್ರಮವಹಿಸಲಾಗುವುದು. ಕಾನೂನು ಸುವ್ಯವಸ್ಥೆಯ ದೃಷ್ಟಿಯಲ್ಲಿ ಒಳ್ಳೆಯ ಕೆಲಸ‌ಮಾಡಬೇಕು ಎಂಬ ಇರಾದೆಯಿಂದಲೇ ನಾನು ಇಲ್ಲಿಗೆ ಬಂದಿದ್ದೇನೆ. ಎಲ್ಲರ ಸಹಕಾರ ಪಡೆದುಕೊಂಡು ಮುಂದುವರಿಯಲಾಗುವುದು ಎಂದರು.

ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್ ಅವರ ನೇತೃತ್ವದಲ್ಲಿ ನಡೆದ ಈ‌ ಮಾತುಕತೆಯಲ್ಲಿ ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಆಲಿಕುಂಞಿ ಮುಂಡಾಜೆ, ಖಾಲಿದ್ ಪುಲಾಬೆ, ಅಬ್ದುಲ್ ರಹಿಮಾನ್ ಪಡ್ಪು, ನಿಸಾರ್ ಕುದ್ರಡ್ಕ, ನವಾಝ್ ಶರೀಫ್ ಪೆರಾಲ್ದರಕಟ್ಟೆ, ಅಝರ್ ನಾವೂರು, ಅಬ್ಬೋನು ಮದ್ದಡ್ಕ, ಕೆ.ಎಸ್ ಅಬ್ದುಲ್ಲ ಕರಾಯ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಕಟ್ಟೆ, ಸಾಲಿಹ್ ಮದ್ದಡ್ಕ ಮೊದಲಾದವರು ಭಾಗವಹಿಸಿದ್ದರು.

Related posts

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya
error: Content is protected !!