24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಜ್ಞಾನ ನಿಲಯ ಬೆಳ್ತಂಗಡಿ ಇಲ್ಲಿ ನ.10 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನಿನಿ ರಾಜ್ಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ. ಬಿನೋಯಿ ಎ.ಜೆ ನೆರವೇರಿಸಿದರು. ಕ್ರಾಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕ ರಾಜಶೇಖರ್ ರವರು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಸಂಪದ ಸಂಸ್ಥೆಯ ಸಂಯೋಜಕ ಸ್ಟ್ಯಾನ್ಲಿ ಫೆರ್ನಾಂಡಿಸ್ ರವರು ಲಿಂಗ ಸಮಾನತೆ ಬಗ್ಗೆ ತಿಳಿದುಕೊಂಡು ಕುಟುಂಬ ಮತ್ತು ಸಮುದಾಯದ ಬೆಳವಣಿಗೆಗೆ ಶ್ರಮಿಸಬೇಕು. ಬದಲಾವಣೆಗಳು ನಮ್ಮಿಂದ ಆಗಬೇಕು, ಮಕ್ಕಳನ್ನು ಗಂಡು ಮತ್ತು ಹೆಣ್ಣು ಎಂಬ ಭೇದವಿಲ್ಲದೆ ಸಮಾನವಾಗಿ ಬೆಳೆಸಬೇಕು, ಆಗ ಮಾತ್ರ ಘನತೆ ಮತ್ತು ಗೌರವದ ಜೀವನ ನಡೆಸಲು ಸಾಧ್ಯ ಎಂಬ ಬಗ್ಗೆ ತರಬೇತಿಯನ್ನು ನೀಡಿದರು. ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎಲಿಯಮ್ಮ ತೋಮಸ್ ಸ್ವಾಗತಿಸಿದರು. ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ವಂದಿಸಿದರು. ಯೋಜನಾ ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೋ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರು ಹಾಗೂ ಮಹಾ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya
error: Content is protected !!