ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ಹಾಗೂ ನವಶಕ್ತಿ ಗುರುವಾಯನಕೆರೆ ಇವರು ರೂ 5 ಲಕ್ಷ ಸಹಾಯಧನವನ್ನು ನೀಡಿ ಸಹಕರಿಸಿದ್ದಾರೆ. ಉದ್ಯಮಿ ರಾಜೇಶ್ ಶೆಟ್ಟಿ ಹಾಗೂ ಸಹೋದರರು ಜೊತೆಗಿದ್ದರು.
ಈ ಸಂದರ್ಭದಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸಿಸ್ಟರ್ ಪ್ರೀತಿ ಜಾರ್ಜ್,ಸಿಸ್ಟರ್ ಮೇಲ್ವಿನ್,ಅಜಿತ್ ಮಾಸ್ಟರ್,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ರೆಜಿ ಜಾರ್ಜ್ ಮೊದಲಾದವರು ಉಪಸ್ಥಿತರಿದ್ದರು.













