May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆಯಿಂದ ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರ ವಿಷಯವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಹಿಂದಿನ ಸರಕಾರಗಳು ರಬ್ಬರು ಕೃಷಿಗೆ ನೀಡಿದ ಪ್ರೋತ್ಸಾಹದಿಂದ ನಮ್ಮ ರಾಜ್ಯದಲ್ಲಿಯೂ ಕೃಷಿಕ ಬೆಳೆಗಾರರು ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ವಾಣಿಜ್ಯ ಬೆಳೆಯಾಗಿ ರಬ್ಬರು ಕೃಷಿಯಲ್ಲಿ ತೊಡಗಿಕೊಂಡಿರುತ್ತಾರೆ. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ವಿವರಿಸಲಾಯಿತು. ಅಂತೆಯೇ ರಬ್ಬರು ಆಮದು ಸುಂಕವನ್ನು ಹೆಚ್ಚಿಸಿ ದೇಶೀಯ ರಬ್ಬರು ಉತ್ಪಾದನೆಗೆ ಹೆಚ್ಚಿನ ಬೇಡಿಕೆ ಬರುವಂತೆ ಮತ್ತು ರಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ನಿಗದಿಪಡಿಸುವಂತೆ ಸರಕಾರವನ್ನು ಬೆಳೆಗಾರರ ಪರವಾಗಿ ಒತ್ತಾಯಿಸಲು ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ಅಧ್ಯಕ್ಷ ಶ್ರೀಧರ ಜಿ ಭಿಡೆ, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿ ರಾಜು ಶೆಟ್ಟಿ, ಬೆಳ್ತಂಗಡಿ ರಬ್ಬರ್ ಸೊಸೈಟಿ ನಿರ್ದೇಶಕ ಶಾಜಿ ಪಿ ಎ ಉಪಸ್ಥಿತರಿದ್ದರು.

Related posts

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya
error: Content is protected !!