23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

ಬೆಳ್ತಂಗಡಿ: ಶಿರಸಿಯಲ್ಲಿ ನ. 8 ಮತ್ತು 9ರಂದು ಇನ್ನರ್ ವೀಲ್ ಕ್ಲಬ್ ಆಯೋಜಿಸಿದ ಸಂಪ್ರೀತಿ ಕಾರ್ಯಕ್ರಮದಲ್ಲಿ, ಸೇವಾಧಾಮದಿಂದ ಪುನಶ್ಚೇತನಗೊಂಡ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ತಯಾರಿಸಿದ ವಿವಿಧ ಕರಕುಶಲ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ದಿವ್ಯಾಂಗರು ಸ್ವಯಂ ತಯಾರಿಸಿದ ಬತ್ತಿಕಟ್ಟು, ಹೂಗಳು, ಉಣ್ಣೆಯ ವಸ್ತುಗಳು, ಗೊಂಬೆಗಳು ಸೇರಿದಂತೆ ಹಲವು ವಿಧದ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಿದರು.

ಈ ಮಳಿಗೆಯನ್ನು ಸೌಜನ್ಯ ತೆಲಂಗ ರವರ ನೇತೃತ್ವದಲ್ಲಿ, ಶ್ರೀ ಕೃಷ್ಣರವರ ಸಹಕಾರದೊಂದಿಗೆ ಪ್ರಥಮ ಬಾರಿಗೆ ಆಯೋಜಿಸಲಾಯಿತು. ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಮಳಿಗೆಯ ಸಂಪೂರ್ಣ ನಿರ್ವಹಣೆಯನ್ನು ದಿವ್ಯಾಂಗರೇ ಮಾಡಿರುವುದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ರೂ.19,000/- ಮೌಲ್ಯದ ವ್ಯಾಪಾರ ನಡೆದಿದ್ದು, ಇದು ಕಾರ್ಯಕ್ರಮದ ಯಶಸ್ಸಿನ ಮತ್ತು ದಿವ್ಯಾಂಗರ ಆತ್ಮವಿಶ್ವಾಸದ ಸ್ಪಷ್ಟ ಉದಾಹರಣೆಯಾಗಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya
error: Content is protected !!