26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಇಳಂತಿಲ: ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ.12ರಂದು ನಡೆದಿದೆ.

ಘಟನೆ ವಿವರ: ಇಳಂತಿಲ ಪಾರಡ್ಕ ಮನೆ, ನಿವಾಸಿ ತಂದೆ ಶ್ರೀಧರ ಕುಂಬಾರ ರವರ ದೂರಿನಂತೆ ಹರ್ಷಿತಾ, ( 15 ವರ್ಷ) ಉಪ್ಪಿನಂಗಡಿ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದು, ನ.04 ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೇ ಇಳಂತಿಲ ಗ್ರಾಮದ ಪಾರಡ್ಕ ಎಂಬಲ್ಲಿ ಮನೆಯಲ್ಲಿದ್ದವಳು ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡವಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ನ.12 ರಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾಳೆ. ಹರ್ಷಿತಾಳಿಗೆ ಕಡಬದ ರಾಜೇಶ್ ಎಂಬಾತನು ಫೋನ್ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರುವುದರಿಂದ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯವಿದೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya
error: Content is protected !!