September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ 616 ಕೋ.ರೂ. ಅನುದಾನ ಬಂದಿದೆ. ಸಂಸದರ ನೇತೃತ್ವದಲ್ಲಿ ಹತ್ತು ದಿನಗಳಲ್ಲಿ ಶಿಲಾನ್ಯಾಸ ನೆರವೇರಲಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವೇಗವಾಗಿ ನೆರವೇರುತ್ತಿದೆ ಎಂದರು. ಕಳೆಂಜದಲ್ಲಿ ಈ ಹಿಂದೆ 309 ಸರ್ವೇ ಸಂಖ್ಯೆಯನ್ನು ಕಂದಾಯ ಅರಣ್ಯ ಇಲಾಖೆ, ಗ್ರಾಮಸ್ಥರು ಹಾಗೂ ಖಾಸಗಿ ಸರ್ವೇದಾರರ ಮೂಲಕ ಶೀಘ್ರವೇ ಸರ್ವೇ ಕಾರ್ಯ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ನ.12 ರಂದು ಉಜಿರೆ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಸುಮಾರು 7 ಬಾರಿ ಸರಕಾರಕ್ಕೆ ಮನವಿ ಮಾಡಿದ್ದೇನೆ. ಆದರೆ ಅನುದಾನ ಒದಗಿಸಿಲ್ಲ. ಸರಕಾರ ನನಗೆ ನೀಡಿರುವ 12 ಕೋ.ರೂ. ಎಸ್.ಎಚ್.ಡಿ.ಪಿ. ಅನುದಾನವನ್ನು ಉಪ್ಪಿನಂಗಡಿ ರಸ್ತೆಗೆ ಮೀಸಲಿರಿಸಿದ್ದೇನೆ. ಸರಕಾರ ಟೆಂಡರ್ ಕರೆದಾಗ ರಸ್ತೆ ಸರಿಪಡಿಸುವ ಭರವಸೆ ನೀಡುತ್ತೇನೆ. ಬೆಳ್ತಂಗಡಿ ಪ.ಪಂ. ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭಾ ನಿಧಿಯಿಂದ 2 ಕೋ.ರೂ. ಅನುದಾನವನ್ನು ಹುಣ್ಸೆಕಟ್ಟೆ ಮಲ್ಲೊಟ್ಟು ರಸ್ತೆಗೆ ನೀಡಿದ್ದಾರೆ. ಈ ಮೂಲಕ ಅಭಿವೃದ್ಧಿ ನಡೆಸಲಾಗುವುದು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ಉಪಾಧ್ಯಕ್ಷ ರವಿ ಬರಮೇಲು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!