March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಂಗಳೂರು ಹಾಗೂ ಸಾಹಿತ್ಯ ಸೌರಭ ಫೌಂಡೇಶನ್ ಒಡಗೋಲ ಇವರ ಸಹಯೋಗದಲ್ಲಿ ಕೊಡಮಾಡುವ ರಾಜ್ಯ ಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿಗೆ‌ ಶಿಕ್ಷಕಿ ಹಾಗೂ ಕವಯಿತ್ರಿ ಪದ್ಮಶ್ರೀ ಎಸ್.ಜೈನ್ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಆಯೋಜಿಸಲಾಗಿದ್ದ “ಕನ್ನಡದ ತೇರು ಎಳೆಯೋಣ ಬಾರ” ಅಭಿಯಾನದ ರಾಜ್ಯಮಟ್ಟದ ಕಾವ್ಯಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪದ್ಮಶ್ರೀ ಎಸ್.ಜೈನ್ ಅವರನ್ನು ಗೌರವಿಸಿ ಈ ಪ್ರಶಸ್ತಿ ಪತ್ರವನ್ನು ನೀಡಲಾಗಿದೆ. ಇವರು ಪ್ರಸಕ್ತ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಿ.ಎಸ್ಸಿ, ಬಿ.ಎಡ್ ಹಾಗೂ ಗಣಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು ಪತ್ರಕರ್ತ ಸಂದೇಶ ಎಸ್.ಜೈನ್ ಅವರ ಪತ್ನಿಯಾಗಿದ್ದಾರೆ. ತಾಲೂಕಿನ ಕನ್ಯಾಡಿ-1 ಗ್ರಾಮದ ಮೇಗಿನ ಸುರೆಕ್ಯಗುತ್ತು ಮನೆಯ ನಿವಾಸಿಯಾಗಿರುವ ಇವರು ಹಾಲಿ ದಾಂಡೇಲಿಯಲ್ಲಿ ವಾಸವಾಗಿದ್ದಾರೆ. 130ಕ್ಕೂ ಹೆಚ್ಚು ಕವನಗಳನ್ನು ಬರೆದಿರುವ ಪದ್ಮಶ್ರೀ ಎಸ್. ಜೈನ್ ಅವರಿಗೆ ಈಗಾಗಲೇ 15ಕ್ಕೂ ಹೆಚ್ಚು ರಾಜ್ಯಮಟ್ಟದ ಪ್ರಶಸ್ತಿಗಳು ಪಡೆದುಕೊಂಡಿದ್ದಾರೆ. ಗಾಯಕಿಯಾಗಿಯೂ ಗಮನ ಸೆಳೆದಿರುವುದರ ಜೊತೆಗೆ ಕ್ರೀಡೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ರಾಜ್ಯಮಟ್ಟದಲ್ಲಿ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya
error: Content is protected !!