25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಂಗಳೂರು ಹಾಗೂ ಸಾಹಿತ್ಯ ಸೌರಭ ಫೌಂಡೇಶನ್ ಒಡಗೋಲ ಇವರ ಸಹಯೋಗದಲ್ಲಿ ಕೊಡಮಾಡುವ ರಾಜ್ಯ ಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿಗೆ‌ ಶಿಕ್ಷಕಿ ಹಾಗೂ ಕವಯಿತ್ರಿ ಪದ್ಮಶ್ರೀ ಎಸ್.ಜೈನ್ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಆಯೋಜಿಸಲಾಗಿದ್ದ “ಕನ್ನಡದ ತೇರು ಎಳೆಯೋಣ ಬಾರ” ಅಭಿಯಾನದ ರಾಜ್ಯಮಟ್ಟದ ಕಾವ್ಯಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪದ್ಮಶ್ರೀ ಎಸ್.ಜೈನ್ ಅವರನ್ನು ಗೌರವಿಸಿ ಈ ಪ್ರಶಸ್ತಿ ಪತ್ರವನ್ನು ನೀಡಲಾಗಿದೆ. ಇವರು ಪ್ರಸಕ್ತ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಿ.ಎಸ್ಸಿ, ಬಿ.ಎಡ್ ಹಾಗೂ ಗಣಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು ಪತ್ರಕರ್ತ ಸಂದೇಶ ಎಸ್.ಜೈನ್ ಅವರ ಪತ್ನಿಯಾಗಿದ್ದಾರೆ. ತಾಲೂಕಿನ ಕನ್ಯಾಡಿ-1 ಗ್ರಾಮದ ಮೇಗಿನ ಸುರೆಕ್ಯಗುತ್ತು ಮನೆಯ ನಿವಾಸಿಯಾಗಿರುವ ಇವರು ಹಾಲಿ ದಾಂಡೇಲಿಯಲ್ಲಿ ವಾಸವಾಗಿದ್ದಾರೆ. 130ಕ್ಕೂ ಹೆಚ್ಚು ಕವನಗಳನ್ನು ಬರೆದಿರುವ ಪದ್ಮಶ್ರೀ ಎಸ್. ಜೈನ್ ಅವರಿಗೆ ಈಗಾಗಲೇ 15ಕ್ಕೂ ಹೆಚ್ಚು ರಾಜ್ಯಮಟ್ಟದ ಪ್ರಶಸ್ತಿಗಳು ಪಡೆದುಕೊಂಡಿದ್ದಾರೆ. ಗಾಯಕಿಯಾಗಿಯೂ ಗಮನ ಸೆಳೆದಿರುವುದರ ಜೊತೆಗೆ ಕ್ರೀಡೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ರಾಜ್ಯಮಟ್ಟದಲ್ಲಿ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!