September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಂಗಳೂರು ಹಾಗೂ ಸಾಹಿತ್ಯ ಸೌರಭ ಫೌಂಡೇಶನ್ ಒಡಗೋಲ ಇವರ ಸಹಯೋಗದಲ್ಲಿ ಕೊಡಮಾಡುವ ರಾಜ್ಯ ಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿಗೆ‌ ಶಿಕ್ಷಕಿ ಹಾಗೂ ಕವಯಿತ್ರಿ ಪದ್ಮಶ್ರೀ ಎಸ್.ಜೈನ್ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಆಯೋಜಿಸಲಾಗಿದ್ದ “ಕನ್ನಡದ ತೇರು ಎಳೆಯೋಣ ಬಾರ” ಅಭಿಯಾನದ ರಾಜ್ಯಮಟ್ಟದ ಕಾವ್ಯಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪದ್ಮಶ್ರೀ ಎಸ್.ಜೈನ್ ಅವರನ್ನು ಗೌರವಿಸಿ ಈ ಪ್ರಶಸ್ತಿ ಪತ್ರವನ್ನು ನೀಡಲಾಗಿದೆ. ಇವರು ಪ್ರಸಕ್ತ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಿ.ಎಸ್ಸಿ, ಬಿ.ಎಡ್ ಹಾಗೂ ಗಣಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು ಪತ್ರಕರ್ತ ಸಂದೇಶ ಎಸ್.ಜೈನ್ ಅವರ ಪತ್ನಿಯಾಗಿದ್ದಾರೆ. ತಾಲೂಕಿನ ಕನ್ಯಾಡಿ-1 ಗ್ರಾಮದ ಮೇಗಿನ ಸುರೆಕ್ಯಗುತ್ತು ಮನೆಯ ನಿವಾಸಿಯಾಗಿರುವ ಇವರು ಹಾಲಿ ದಾಂಡೇಲಿಯಲ್ಲಿ ವಾಸವಾಗಿದ್ದಾರೆ. 130ಕ್ಕೂ ಹೆಚ್ಚು ಕವನಗಳನ್ನು ಬರೆದಿರುವ ಪದ್ಮಶ್ರೀ ಎಸ್. ಜೈನ್ ಅವರಿಗೆ ಈಗಾಗಲೇ 15ಕ್ಕೂ ಹೆಚ್ಚು ರಾಜ್ಯಮಟ್ಟದ ಪ್ರಶಸ್ತಿಗಳು ಪಡೆದುಕೊಂಡಿದ್ದಾರೆ. ಗಾಯಕಿಯಾಗಿಯೂ ಗಮನ ಸೆಳೆದಿರುವುದರ ಜೊತೆಗೆ ಕ್ರೀಡೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ರಾಜ್ಯಮಟ್ಟದಲ್ಲಿ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!