July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

ಬೆಳ್ತಂಗಡಿ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ), ಕಳೆಂಜ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಬಿಷಪ್ ಮಾರ್ ಜೇಮ್ಸ್ ಪಟ್ಟೆರಿಲ್ CMF, ಅವರಿಗೆ ಸನ್ಮಾನ ಹಾಗೂ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮವು ಇಂದು ಸಂಜೆ ಬೆಳ್ತಂಗಡಿ ಬಿಷಪ್ ಹೌಸ್‌ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಅಧ್ಯಕ್ಷ ಅಗಸ್ಟೀನ್ T. A., ಗೌರವಾಧ್ಯಕ್ಷ ಸೆಬಾಸ್ಟಿಯನ್ P. T., ಉಪಾಧ್ಯಕ್ಷ ಮ್ಯಾಥ್ಯೂ V. T., ಕಾರ್ಯದರ್ಶಿ ಶಿಜೋ ಜೋಸೆಫ್, ಕೋಶಾಧಿಕಾರಿ ರಂಜಿತ್ P. S, ಜೋಸೆಪ್ ಕೆ ಡಿ, ಮಾಜಿ ಅಧ್ಯಕ್ಷರು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸಂಸ್ಥೆಯ ಪರವಾಗಿ ಮಾತನಾಡಿದ ಅಧ್ಯಕ್ಷ ಅಗಸ್ಟೀನ್ T. A. ಅವರು ಹೇಳಿದರು:
ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘವು ಜನಸೇವೆ, ಬಡವರ ಏಳಿಗೆ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಕೊಂಡಿದೆ.
ನೂತನ ಧರ್ಮಾಧ್ಯಕ್ಷರಾದ ಮಾರ್ ಜೇಮ್ಸ್ ಪಟ್ಟೆರಿಲ್ ಬಿಷಪರ ಸಹಕಾರ ಮತ್ತು ಪ್ರೇರಣೆಯಿಂದ ಮುಂದಿನ ದಿನಗಳಲ್ಲಿ ಸಂಘದ ಕಾರ್ಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಸಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾರ್ ಜೇಮ್ಸ್ ಪಟ್ಟೆರಿಲ್ ಬಿಷಪರಿಗೆ ಸನ್ಮಾನ ಪತ್ರ ನೀಡಿ ಶಾಲು ಹೊದಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಂತ್ಯದಲ್ಲಿ ಸದಸ್ಯರು ಭಿಷಪರೊಂದಿಗೆ ಮಾತುಕತೆ ನಡೆಸಿ, CBK ಸಂಘಟನೆಯ ಭವಿಷ್ಯ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು.
ಬಿಷಪ್ ಸಂಘಟನೆಯ ಸೇವಾ ಚಟುವಟಿಕೆಗಳನ್ನು ಮೆಚ್ಚಿ, “ಇಂತಹ ಸಂಸ್ಥೆಗಳು ಸಮಾಜದ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ. ಯಾರು ಇಲ್ಲದವರಿಗೂ ನೀವು ಇದ್ದೀರಿ ಎಂಬುದು ನಿಜವಾದ ಕ್ರೈಸ್ತ ಸೇವೆಯ ಸಂಕೇತ,” ಎಂದು ಪ್ರೋತ್ಸಾಹದ ಮಾತುಗಳನ್ನು ನೀಡಿ ಆಶೀರ್ವಾದ ನೀಡಿದರು.

Related posts

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!