22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಇಳಂತಿಲ: ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ.12ರಂದು ನಡೆದಿದೆ.

ಘಟನೆ ವಿವರ: ಇಳಂತಿಲ ಪಾರಡ್ಕ ಮನೆ, ನಿವಾಸಿ ತಂದೆ ಶ್ರೀಧರ ಕುಂಬಾರ ರವರ ದೂರಿನಂತೆ ಹರ್ಷಿತಾ, ( 15 ವರ್ಷ) ಉಪ್ಪಿನಂಗಡಿ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದು, ನ.04 ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೇ ಇಳಂತಿಲ ಗ್ರಾಮದ ಪಾರಡ್ಕ ಎಂಬಲ್ಲಿ ಮನೆಯಲ್ಲಿದ್ದವಳು ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡವಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ನ.12 ರಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾಳೆ. ಹರ್ಷಿತಾಳಿಗೆ ಕಡಬದ ರಾಜೇಶ್ ಎಂಬಾತನು ಫೋನ್ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರುವುದರಿಂದ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯವಿದೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಬಾರ್ಯ: ಆನೆಪಲ್ಲ ನಿವಾಸಿ ಸೇಸಪ್ಪ ನಾಯ್ಕ್ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya
error: Content is protected !!