September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ 616 ಕೋ.ರೂ. ಅನುದಾನ ಬಂದಿದೆ. ಸಂಸದರ ನೇತೃತ್ವದಲ್ಲಿ ಹತ್ತು ದಿನಗಳಲ್ಲಿ ಶಿಲಾನ್ಯಾಸ ನೆರವೇರಲಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವೇಗವಾಗಿ ನೆರವೇರುತ್ತಿದೆ ಎಂದರು. ಕಳೆಂಜದಲ್ಲಿ ಈ ಹಿಂದೆ 309 ಸರ್ವೇ ಸಂಖ್ಯೆಯನ್ನು ಕಂದಾಯ ಅರಣ್ಯ ಇಲಾಖೆ, ಗ್ರಾಮಸ್ಥರು ಹಾಗೂ ಖಾಸಗಿ ಸರ್ವೇದಾರರ ಮೂಲಕ ಶೀಘ್ರವೇ ಸರ್ವೇ ಕಾರ್ಯ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ನ.12 ರಂದು ಉಜಿರೆ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಸುಮಾರು 7 ಬಾರಿ ಸರಕಾರಕ್ಕೆ ಮನವಿ ಮಾಡಿದ್ದೇನೆ. ಆದರೆ ಅನುದಾನ ಒದಗಿಸಿಲ್ಲ. ಸರಕಾರ ನನಗೆ ನೀಡಿರುವ 12 ಕೋ.ರೂ. ಎಸ್.ಎಚ್.ಡಿ.ಪಿ. ಅನುದಾನವನ್ನು ಉಪ್ಪಿನಂಗಡಿ ರಸ್ತೆಗೆ ಮೀಸಲಿರಿಸಿದ್ದೇನೆ. ಸರಕಾರ ಟೆಂಡರ್ ಕರೆದಾಗ ರಸ್ತೆ ಸರಿಪಡಿಸುವ ಭರವಸೆ ನೀಡುತ್ತೇನೆ. ಬೆಳ್ತಂಗಡಿ ಪ.ಪಂ. ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭಾ ನಿಧಿಯಿಂದ 2 ಕೋ.ರೂ. ಅನುದಾನವನ್ನು ಹುಣ್ಸೆಕಟ್ಟೆ ಮಲ್ಲೊಟ್ಟು ರಸ್ತೆಗೆ ನೀಡಿದ್ದಾರೆ. ಈ ಮೂಲಕ ಅಭಿವೃದ್ಧಿ ನಡೆಸಲಾಗುವುದು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ಉಪಾಧ್ಯಕ್ಷ ರವಿ ಬರಮೇಲು ಉಪಸ್ಥಿತರಿದ್ದರು.

Related posts

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!