26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ 616 ಕೋ.ರೂ. ಅನುದಾನ ಬಂದಿದೆ. ಸಂಸದರ ನೇತೃತ್ವದಲ್ಲಿ ಹತ್ತು ದಿನಗಳಲ್ಲಿ ಶಿಲಾನ್ಯಾಸ ನೆರವೇರಲಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವೇಗವಾಗಿ ನೆರವೇರುತ್ತಿದೆ ಎಂದರು. ಕಳೆಂಜದಲ್ಲಿ ಈ ಹಿಂದೆ 309 ಸರ್ವೇ ಸಂಖ್ಯೆಯನ್ನು ಕಂದಾಯ ಅರಣ್ಯ ಇಲಾಖೆ, ಗ್ರಾಮಸ್ಥರು ಹಾಗೂ ಖಾಸಗಿ ಸರ್ವೇದಾರರ ಮೂಲಕ ಶೀಘ್ರವೇ ಸರ್ವೇ ಕಾರ್ಯ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ನ.12 ರಂದು ಉಜಿರೆ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಸುಮಾರು 7 ಬಾರಿ ಸರಕಾರಕ್ಕೆ ಮನವಿ ಮಾಡಿದ್ದೇನೆ. ಆದರೆ ಅನುದಾನ ಒದಗಿಸಿಲ್ಲ. ಸರಕಾರ ನನಗೆ ನೀಡಿರುವ 12 ಕೋ.ರೂ. ಎಸ್.ಎಚ್.ಡಿ.ಪಿ. ಅನುದಾನವನ್ನು ಉಪ್ಪಿನಂಗಡಿ ರಸ್ತೆಗೆ ಮೀಸಲಿರಿಸಿದ್ದೇನೆ. ಸರಕಾರ ಟೆಂಡರ್ ಕರೆದಾಗ ರಸ್ತೆ ಸರಿಪಡಿಸುವ ಭರವಸೆ ನೀಡುತ್ತೇನೆ. ಬೆಳ್ತಂಗಡಿ ಪ.ಪಂ. ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭಾ ನಿಧಿಯಿಂದ 2 ಕೋ.ರೂ. ಅನುದಾನವನ್ನು ಹುಣ್ಸೆಕಟ್ಟೆ ಮಲ್ಲೊಟ್ಟು ರಸ್ತೆಗೆ ನೀಡಿದ್ದಾರೆ. ಈ ಮೂಲಕ ಅಭಿವೃದ್ಧಿ ನಡೆಸಲಾಗುವುದು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ಉಪಾಧ್ಯಕ್ಷ ರವಿ ಬರಮೇಲು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya
error: Content is protected !!