24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ 616 ಕೋ.ರೂ. ಅನುದಾನ ಬಂದಿದೆ. ಸಂಸದರ ನೇತೃತ್ವದಲ್ಲಿ ಹತ್ತು ದಿನಗಳಲ್ಲಿ ಶಿಲಾನ್ಯಾಸ ನೆರವೇರಲಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವೇಗವಾಗಿ ನೆರವೇರುತ್ತಿದೆ ಎಂದರು. ಕಳೆಂಜದಲ್ಲಿ ಈ ಹಿಂದೆ 309 ಸರ್ವೇ ಸಂಖ್ಯೆಯನ್ನು ಕಂದಾಯ ಅರಣ್ಯ ಇಲಾಖೆ, ಗ್ರಾಮಸ್ಥರು ಹಾಗೂ ಖಾಸಗಿ ಸರ್ವೇದಾರರ ಮೂಲಕ ಶೀಘ್ರವೇ ಸರ್ವೇ ಕಾರ್ಯ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ನ.12 ರಂದು ಉಜಿರೆ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಸುಮಾರು 7 ಬಾರಿ ಸರಕಾರಕ್ಕೆ ಮನವಿ ಮಾಡಿದ್ದೇನೆ. ಆದರೆ ಅನುದಾನ ಒದಗಿಸಿಲ್ಲ. ಸರಕಾರ ನನಗೆ ನೀಡಿರುವ 12 ಕೋ.ರೂ. ಎಸ್.ಎಚ್.ಡಿ.ಪಿ. ಅನುದಾನವನ್ನು ಉಪ್ಪಿನಂಗಡಿ ರಸ್ತೆಗೆ ಮೀಸಲಿರಿಸಿದ್ದೇನೆ. ಸರಕಾರ ಟೆಂಡರ್ ಕರೆದಾಗ ರಸ್ತೆ ಸರಿಪಡಿಸುವ ಭರವಸೆ ನೀಡುತ್ತೇನೆ. ಬೆಳ್ತಂಗಡಿ ಪ.ಪಂ. ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭಾ ನಿಧಿಯಿಂದ 2 ಕೋ.ರೂ. ಅನುದಾನವನ್ನು ಹುಣ್ಸೆಕಟ್ಟೆ ಮಲ್ಲೊಟ್ಟು ರಸ್ತೆಗೆ ನೀಡಿದ್ದಾರೆ. ಈ ಮೂಲಕ ಅಭಿವೃದ್ಧಿ ನಡೆಸಲಾಗುವುದು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ಉಪಾಧ್ಯಕ್ಷ ರವಿ ಬರಮೇಲು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!