ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಮತ್ತು 39/25 ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೇಟ್ಟಿಲ್ಲೇರಿದ್ದ ತಿಮರೋಡಿ ಮಹೇಶ್ ಶೆಟ್ಟಿ ,ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ ಸಲ್ಲಿಸಿದ್ದ ಅರ್ಜಿಗೆ ಅ.30 ರಂದು ವಿಚಾರಣೆ ವೇಳೆ ಹೈಕೋರ್ಟ್ ನಲ್ಲಿ ನ.12 ರವೆಗೆ ಎಸ್.ಐ.ಟಿ ತನಿಖೆಗೆ ತಡೆಯಾಜ್ಞೆ ನೀಡಿತ್ತು.
ಈ ಪ್ರಕರಣ ಸಂಬಂಧ ನ. 12 ರಂದು ಹೈಕೋರ್ಟ್ ಎಸ್.ಐ.ಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿ ತನಿಖೆ ಮುಂದುವರಿಸಲು ಸೂಚನೆ ನೀಡಿದೆ. ಪ್ರಕರಣ ರದ್ದು ಕೋರಿದ ಅರ್ಜಿಯ ವಿಚಾರಣೆಯನ್ನು ಮುಂದೂಡಿದಿದೆ.











