23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಂಗಳೂರು ಹಾಗೂ ಸಾಹಿತ್ಯ ಸೌರಭ ಫೌಂಡೇಶನ್ ಒಡಗೋಲ ಇವರ ಸಹಯೋಗದಲ್ಲಿ ಕೊಡಮಾಡುವ ರಾಜ್ಯ ಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿಗೆ‌ ಶಿಕ್ಷಕಿ ಹಾಗೂ ಕವಯಿತ್ರಿ ಪದ್ಮಶ್ರೀ ಎಸ್.ಜೈನ್ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಆಯೋಜಿಸಲಾಗಿದ್ದ “ಕನ್ನಡದ ತೇರು ಎಳೆಯೋಣ ಬಾರ” ಅಭಿಯಾನದ ರಾಜ್ಯಮಟ್ಟದ ಕಾವ್ಯಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪದ್ಮಶ್ರೀ ಎಸ್.ಜೈನ್ ಅವರನ್ನು ಗೌರವಿಸಿ ಈ ಪ್ರಶಸ್ತಿ ಪತ್ರವನ್ನು ನೀಡಲಾಗಿದೆ. ಇವರು ಪ್ರಸಕ್ತ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಿ.ಎಸ್ಸಿ, ಬಿ.ಎಡ್ ಹಾಗೂ ಗಣಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು ಪತ್ರಕರ್ತ ಸಂದೇಶ ಎಸ್.ಜೈನ್ ಅವರ ಧರ್ಮಪತ್ನಿಯಾಗಿದ್ದಾರೆ.

ತಾಲೂಕಿನ ಕನ್ಯಾಡಿ-1 ಗ್ರಾಮದ ಮೇಗಿನ ಸುರೆಕ್ಯಗುತ್ತು ಮನೆಯ ನಿವಾಸಿಯಾಗಿರುವ ಇವರು ಹಾಲಿ ದಾಂಡೇಲಿಯಲ್ಲಿ ವಾಸವಾಗಿದ್ದಾರೆ. 130ಕ್ಕೂ ಹೆಚ್ಚು ಕವನಗಳನ್ನು ಬರೆದಿರುವ ಪದ್ಮಶ್ರೀ ಎಸ್. ಜೈನ್ ಅವರಿಗೆ ಈಗಾಗಲೇ 15ಕ್ಕೂ ಹೆಚ್ಚು ರಾಜ್ಯಮಟ್ಟದ ಪ್ರಶಸ್ತಿಗಳು ಬಂದಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಗಾಯಕಿಯಾಗಿಯೂ ಗಮನ ಸೆಳೆದಿರುವುದರ ಜೊತೆಗೆ ಕ್ರೀಡೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ರಾಜ್ಯಮಟ್ಟದಲ್ಲಿ ಬಹುಮಾನವನ್ನು ಪಡೆದುಕೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

Related posts

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya
error: Content is protected !!