25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

ಬೆಳ್ತಂಗಡಿ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ), ಕಳೆಂಜ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಬಿಷಪ್ ಮಾರ್ ಜೇಮ್ಸ್ ಪಟ್ಟೆರಿಲ್ CMF, ಅವರಿಗೆ ಸನ್ಮಾನ ಹಾಗೂ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮವು ಇಂದು ಸಂಜೆ ಬೆಳ್ತಂಗಡಿ ಬಿಷಪ್ ಹೌಸ್‌ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಅಧ್ಯಕ್ಷ ಅಗಸ್ಟೀನ್ T. A., ಗೌರವಾಧ್ಯಕ್ಷ ಸೆಬಾಸ್ಟಿಯನ್ P. T., ಉಪಾಧ್ಯಕ್ಷ ಮ್ಯಾಥ್ಯೂ V. T., ಕಾರ್ಯದರ್ಶಿ ಶಿಜೋ ಜೋಸೆಫ್, ಕೋಶಾಧಿಕಾರಿ ರಂಜಿತ್ P. S, ಜೋಸೆಪ್ ಕೆ ಡಿ, ಮಾಜಿ ಅಧ್ಯಕ್ಷರು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸಂಸ್ಥೆಯ ಪರವಾಗಿ ಮಾತನಾಡಿದ ಅಧ್ಯಕ್ಷ ಅಗಸ್ಟೀನ್ T. A. ಅವರು ಹೇಳಿದರು:
ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘವು ಜನಸೇವೆ, ಬಡವರ ಏಳಿಗೆ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಕೊಂಡಿದೆ.
ನೂತನ ಧರ್ಮಾಧ್ಯಕ್ಷರಾದ ಮಾರ್ ಜೇಮ್ಸ್ ಪಟ್ಟೆರಿಲ್ ಬಿಷಪರ ಸಹಕಾರ ಮತ್ತು ಪ್ರೇರಣೆಯಿಂದ ಮುಂದಿನ ದಿನಗಳಲ್ಲಿ ಸಂಘದ ಕಾರ್ಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಸಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾರ್ ಜೇಮ್ಸ್ ಪಟ್ಟೆರಿಲ್ ಬಿಷಪರಿಗೆ ಸನ್ಮಾನ ಪತ್ರ ನೀಡಿ ಶಾಲು ಹೊದಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಂತ್ಯದಲ್ಲಿ ಸದಸ್ಯರು ಭಿಷಪರೊಂದಿಗೆ ಮಾತುಕತೆ ನಡೆಸಿ, CBK ಸಂಘಟನೆಯ ಭವಿಷ್ಯ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು.
ಬಿಷಪ್ ಸಂಘಟನೆಯ ಸೇವಾ ಚಟುವಟಿಕೆಗಳನ್ನು ಮೆಚ್ಚಿ, “ಇಂತಹ ಸಂಸ್ಥೆಗಳು ಸಮಾಜದ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ. ಯಾರು ಇಲ್ಲದವರಿಗೂ ನೀವು ಇದ್ದೀರಿ ಎಂಬುದು ನಿಜವಾದ ಕ್ರೈಸ್ತ ಸೇವೆಯ ಸಂಕೇತ,” ಎಂದು ಪ್ರೋತ್ಸಾಹದ ಮಾತುಗಳನ್ನು ನೀಡಿ ಆಶೀರ್ವಾದ ನೀಡಿದರು.

Related posts

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya
error: Content is protected !!