July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ 616 ಕೋ.ರೂ. ಅನುದಾನ ಬಂದಿದೆ. ಸಂಸದರ ನೇತೃತ್ವದಲ್ಲಿ ಹತ್ತು ದಿನಗಳಲ್ಲಿ ಶಿಲಾನ್ಯಾಸ ನೆರವೇರಲಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವೇಗವಾಗಿ ನೆರವೇರುತ್ತಿದೆ ಎಂದರು. ಕಳೆಂಜದಲ್ಲಿ ಈ ಹಿಂದೆ 309 ಸರ್ವೇ ಸಂಖ್ಯೆಯನ್ನು ಕಂದಾಯ ಅರಣ್ಯ ಇಲಾಖೆ, ಗ್ರಾಮಸ್ಥರು ಹಾಗೂ ಖಾಸಗಿ ಸರ್ವೇದಾರರ ಮೂಲಕ ಶೀಘ್ರವೇ ಸರ್ವೇ ಕಾರ್ಯ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ನ.12 ರಂದು ಉಜಿರೆ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಸುಮಾರು 7 ಬಾರಿ ಸರಕಾರಕ್ಕೆ ಮನವಿ ಮಾಡಿದ್ದೇನೆ. ಆದರೆ ಅನುದಾನ ಒದಗಿಸಿಲ್ಲ. ಸರಕಾರ ನನಗೆ ನೀಡಿರುವ 12 ಕೋ.ರೂ. ಎಸ್.ಎಚ್.ಡಿ.ಪಿ. ಅನುದಾನವನ್ನು ಉಪ್ಪಿನಂಗಡಿ ರಸ್ತೆಗೆ ಮೀಸಲಿರಿಸಿದ್ದೇನೆ. ಸರಕಾರ ಟೆಂಡರ್ ಕರೆದಾಗ ರಸ್ತೆ ಸರಿಪಡಿಸುವ ಭರವಸೆ ನೀಡುತ್ತೇನೆ. ಬೆಳ್ತಂಗಡಿ ಪ.ಪಂ. ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭಾ ನಿಧಿಯಿಂದ 2 ಕೋ.ರೂ. ಅನುದಾನವನ್ನು ಹುಣ್ಸೆಕಟ್ಟೆ ಮಲ್ಲೊಟ್ಟು ರಸ್ತೆಗೆ ನೀಡಿದ್ದಾರೆ. ಈ ಮೂಲಕ ಅಭಿವೃದ್ಧಿ ನಡೆಸಲಾಗುವುದು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ಉಪಾಧ್ಯಕ್ಷ ರವಿ ಬರಮೇಲು ಉಪಸ್ಥಿತರಿದ್ದರು.

Related posts

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಸಮಾರಂಭ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya
error: Content is protected !!