27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ, ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ಗಳು ಪರಿಶೀಲಿಸಲಿದ್ದಾರೆ.ಉನ್ನತಾಧಿಕಾರಿಗಳು ನಿಗಾ ಇಡುವ ಕಾರಣ, ವಲಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದೂ ಸಚಿವ ಖಂಡ್ರೆ ತಿಳಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!