September 6, 2026
ಸಾಧಕರು

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಂಗಳೂರು ಹಾಗೂ ಸಾಹಿತ್ಯ ಸೌರಭ ಫೌಂಡೇಶನ್ ಒಡಗೋಲ ಇವರ ಸಹಯೋಗದಲ್ಲಿ ಕೊಡಮಾಡುವ ರಾಜ್ಯ ಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿಗೆ‌ ಶಿಕ್ಷಕಿ ಹಾಗೂ ಕವಯಿತ್ರಿ ಪದ್ಮಶ್ರೀ ಎಸ್.ಜೈನ್ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಆಯೋಜಿಸಲಾಗಿದ್ದ “ಕನ್ನಡದ ತೇರು ಎಳೆಯೋಣ ಬಾರ” ಅಭಿಯಾನದ ರಾಜ್ಯಮಟ್ಟದ ಕಾವ್ಯಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪದ್ಮಶ್ರೀ ಎಸ್.ಜೈನ್ ಅವರನ್ನು ಗೌರವಿಸಿ ಈ ಪ್ರಶಸ್ತಿ ಪತ್ರವನ್ನು ನೀಡಲಾಗಿದೆ. ಇವರು ಪ್ರಸಕ್ತ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಿ.ಎಸ್ಸಿ, ಬಿ.ಎಡ್ ಹಾಗೂ ಗಣಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು ಪತ್ರಕರ್ತ ಸಂದೇಶ ಎಸ್.ಜೈನ್ ಅವರ ಧರ್ಮಪತ್ನಿಯಾಗಿದ್ದಾರೆ.

ತಾಲೂಕಿನ ಕನ್ಯಾಡಿ-1 ಗ್ರಾಮದ ಮೇಗಿನ ಸುರೆಕ್ಯಗುತ್ತು ಮನೆಯ ನಿವಾಸಿಯಾಗಿರುವ ಇವರು ಹಾಲಿ ದಾಂಡೇಲಿಯಲ್ಲಿ ವಾಸವಾಗಿದ್ದಾರೆ. 130ಕ್ಕೂ ಹೆಚ್ಚು ಕವನಗಳನ್ನು ಬರೆದಿರುವ ಪದ್ಮಶ್ರೀ ಎಸ್. ಜೈನ್ ಅವರಿಗೆ ಈಗಾಗಲೇ 15ಕ್ಕೂ ಹೆಚ್ಚು ರಾಜ್ಯಮಟ್ಟದ ಪ್ರಶಸ್ತಿಗಳು ಬಂದಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಗಾಯಕಿಯಾಗಿಯೂ ಗಮನ ಸೆಳೆದಿರುವುದರ ಜೊತೆಗೆ ಕ್ರೀಡೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ರಾಜ್ಯಮಟ್ಟದಲ್ಲಿ ಬಹುಮಾನವನ್ನು ಪಡೆದುಕೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

Related posts

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya
error: Content is protected !!