25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

ಬೆಳ್ತಂಗಡಿ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ), ಕಳೆಂಜ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಬಿಷಪ್ ಮಾರ್ ಜೇಮ್ಸ್ ಪಟ್ಟೆರಿಲ್ CMF, ಅವರಿಗೆ ಸನ್ಮಾನ ಹಾಗೂ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮವು ಇಂದು ಸಂಜೆ ಬೆಳ್ತಂಗಡಿ ಬಿಷಪ್ ಹೌಸ್‌ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಅಧ್ಯಕ್ಷ ಅಗಸ್ಟೀನ್ T. A., ಗೌರವಾಧ್ಯಕ್ಷ ಸೆಬಾಸ್ಟಿಯನ್ P. T., ಉಪಾಧ್ಯಕ್ಷ ಮ್ಯಾಥ್ಯೂ V. T., ಕಾರ್ಯದರ್ಶಿ ಶಿಜೋ ಜೋಸೆಫ್, ಕೋಶಾಧಿಕಾರಿ ರಂಜಿತ್ P. S, ಜೋಸೆಪ್ ಕೆ ಡಿ, ಮಾಜಿ ಅಧ್ಯಕ್ಷರು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸಂಸ್ಥೆಯ ಪರವಾಗಿ ಮಾತನಾಡಿದ ಅಧ್ಯಕ್ಷ ಅಗಸ್ಟೀನ್ T. A. ಅವರು ಹೇಳಿದರು:
ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘವು ಜನಸೇವೆ, ಬಡವರ ಏಳಿಗೆ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಕೊಂಡಿದೆ.
ನೂತನ ಧರ್ಮಾಧ್ಯಕ್ಷರಾದ ಮಾರ್ ಜೇಮ್ಸ್ ಪಟ್ಟೆರಿಲ್ ಬಿಷಪರ ಸಹಕಾರ ಮತ್ತು ಪ್ರೇರಣೆಯಿಂದ ಮುಂದಿನ ದಿನಗಳಲ್ಲಿ ಸಂಘದ ಕಾರ್ಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಸಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾರ್ ಜೇಮ್ಸ್ ಪಟ್ಟೆರಿಲ್ ಬಿಷಪರಿಗೆ ಸನ್ಮಾನ ಪತ್ರ ನೀಡಿ ಶಾಲು ಹೊದಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಂತ್ಯದಲ್ಲಿ ಸದಸ್ಯರು ಭಿಷಪರೊಂದಿಗೆ ಮಾತುಕತೆ ನಡೆಸಿ, CBK ಸಂಘಟನೆಯ ಭವಿಷ್ಯ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು.
ಬಿಷಪ್ ಸಂಘಟನೆಯ ಸೇವಾ ಚಟುವಟಿಕೆಗಳನ್ನು ಮೆಚ್ಚಿ, “ಇಂತಹ ಸಂಸ್ಥೆಗಳು ಸಮಾಜದ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ. ಯಾರು ಇಲ್ಲದವರಿಗೂ ನೀವು ಇದ್ದೀರಿ ಎಂಬುದು ನಿಜವಾದ ಕ್ರೈಸ್ತ ಸೇವೆಯ ಸಂಕೇತ,” ಎಂದು ಪ್ರೋತ್ಸಾಹದ ಮಾತುಗಳನ್ನು ನೀಡಿ ಆಶೀರ್ವಾದ ನೀಡಿದರು.

Related posts

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya
error: Content is protected !!