23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

ಬೆಳ್ತಂಗಡಿ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ), ಕಳೆಂಜ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಬಿಷಪ್ ಮಾರ್ ಜೇಮ್ಸ್ ಪಟ್ಟೆರಿಲ್ CMF, ಅವರಿಗೆ ಸನ್ಮಾನ ಹಾಗೂ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮವು ಇಂದು ಸಂಜೆ ಬೆಳ್ತಂಗಡಿ ಬಿಷಪ್ ಹೌಸ್‌ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಅಧ್ಯಕ್ಷ ಅಗಸ್ಟೀನ್ T. A., ಗೌರವಾಧ್ಯಕ್ಷ ಸೆಬಾಸ್ಟಿಯನ್ P. T., ಉಪಾಧ್ಯಕ್ಷ ಮ್ಯಾಥ್ಯೂ V. T., ಕಾರ್ಯದರ್ಶಿ ಶಿಜೋ ಜೋಸೆಫ್, ಕೋಶಾಧಿಕಾರಿ ರಂಜಿತ್ P. S, ಜೋಸೆಪ್ ಕೆ ಡಿ, ಮಾಜಿ ಅಧ್ಯಕ್ಷರು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸಂಸ್ಥೆಯ ಪರವಾಗಿ ಮಾತನಾಡಿದ ಅಧ್ಯಕ್ಷ ಅಗಸ್ಟೀನ್ T. A. ಅವರು ಹೇಳಿದರು:
ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘವು ಜನಸೇವೆ, ಬಡವರ ಏಳಿಗೆ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಕೊಂಡಿದೆ.
ನೂತನ ಧರ್ಮಾಧ್ಯಕ್ಷರಾದ ಮಾರ್ ಜೇಮ್ಸ್ ಪಟ್ಟೆರಿಲ್ ಬಿಷಪರ ಸಹಕಾರ ಮತ್ತು ಪ್ರೇರಣೆಯಿಂದ ಮುಂದಿನ ದಿನಗಳಲ್ಲಿ ಸಂಘದ ಕಾರ್ಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಸಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾರ್ ಜೇಮ್ಸ್ ಪಟ್ಟೆರಿಲ್ ಬಿಷಪರಿಗೆ ಸನ್ಮಾನ ಪತ್ರ ನೀಡಿ ಶಾಲು ಹೊದಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಂತ್ಯದಲ್ಲಿ ಸದಸ್ಯರು ಭಿಷಪರೊಂದಿಗೆ ಮಾತುಕತೆ ನಡೆಸಿ, CBK ಸಂಘಟನೆಯ ಭವಿಷ್ಯ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು.
ಬಿಷಪ್ ಸಂಘಟನೆಯ ಸೇವಾ ಚಟುವಟಿಕೆಗಳನ್ನು ಮೆಚ್ಚಿ, “ಇಂತಹ ಸಂಸ್ಥೆಗಳು ಸಮಾಜದ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ. ಯಾರು ಇಲ್ಲದವರಿಗೂ ನೀವು ಇದ್ದೀರಿ ಎಂಬುದು ನಿಜವಾದ ಕ್ರೈಸ್ತ ಸೇವೆಯ ಸಂಕೇತ,” ಎಂದು ಪ್ರೋತ್ಸಾಹದ ಮಾತುಗಳನ್ನು ನೀಡಿ ಆಶೀರ್ವಾದ ನೀಡಿದರು.

Related posts

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya
error: Content is protected !!