July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ .ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ರವರು ವಹಿಸಿಕೊಂಡು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಭ್ಯಾಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಶಿಲ್ಪಾ ಹಾಗೂ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಮತ್ತು ಕಾರ್ಯಕ್ರಮದ ಸಂಯೋಜಕರು , ಅಭ್ಯಾಸ್ ಪಿ .ಯು ಕಾಲೇಜಿನ ಉಪಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಹಾಗೂ ಪ್ರಭಾರ ಪ್ರಾಂಶುಪಾಲರಾದ ಗುರುಪ್ರಸಾದ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಈ ಶುಭ ಸಂದರ್ಭದಲ್ಲಿ ಕನಕದಾಸ ಜಯಂತಿಯು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಗೌರವಿಸಲು , ಸಾಮಾಜಿಕ ಸಮಾನತೆಯನ್ನು ಎತ್ತಿ ಹಿಡಿಯಲು , ನಮ್ಮ ಜೀವನಕ್ಕೆ ದಾರಿದೀಪವಾಗಬಲ್ಲ ದಾಸ ಸಾಹಿತ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಕೀರ್ತನೆ ಮತ್ತು ತತ್ವಪದಗಳು ಸಮಾಜಕ್ಕೆ ನೀಡಿದ ಸಂದೇಶ ಇಂದಿಗೂ ದಾರಿದೀಪವಾಗಿದೆ ಎಂಬ ವಿಚಾರಗಳನ್ನ ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ಸಂಸ್ಥೆಯ ಕಾರ್ಯದರ್ಶಿ ಗಳಾದ ಶ್ರೀಮತಿ. ಶಿಲ್ಪಾ ಅವರು ದಾಸ ಕೀರ್ತನೆಗಳು ಅಧ್ಯಾತ್ಮ ಮತ್ತು ಮಾನವೀಯತೆಯ ಸಂದೇಶವನ್ನು ಸಾರುತ್ತದೆ, ಇದು ಕೇವಲ ಆಚರಣೆಯ ದಿನವಾಗಿರದೆ ನಮ್ಮ ನಾಡಿನ ಭಕ್ತಿ, ಶಾಂತಿ, ಸಾಮಾಜಿಕ ಸಾಮರಸ್ಯ ಮುಂತಾದ ಮೌಲ್ಯಗಳನ್ನು ನೆನಪಿಸುವ ಮಹತ್ವದ ಕ್ಷಣಗಳಾಗಿವೆ ಎಂದು ಅಭಿಪ್ರಾಯ ಪಟ್ಟರು.

ಪಿ.ಆರ್.ಓ ಧನಂಜಯ ಹಾಗೂ ಎಲ್ಲಾ ಬೋಧಕೇತರ ಸಿಬ್ಬಂದಿ ವರ್ಗದವರೂ, ಸಹಾಯಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು . ವಿದ್ಯಾರ್ಥಿ ತನುಶ್ರೀ ಪ್ರಾರ್ಥನೆಗೈದರು, ಕನ್ನಡ ವಿಭಾಗದ ಉಪನ್ಯಾಸಕರಾದ ಸುಧೀರ್ ನಿರೂಪಿಸಿದರು, ನಿಲಯ ಪಾಲಕರಾದ ಜೀತೇಶ್ ಸ್ವಾಗತಿಸಿದರು.

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!