September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳ ರೋಗ ತಪಾಸಣೆ ಉಚಿತವಾಗಿ ನಡೆಸಲಾಗುವುದು.


ಅಸ್ತಮ, ಉಬ್ಬಸ ಅತಿಸಾರ (ಅತಿಭೇದಿ), ಮಲಬದ್ಧತೆ, ಜ್ವರ, ಅಲರ್ಜಿ, ರ‍್ಯಾಶಸ್ (ದದ್ದುಗಳು), ಚರ್ಮದ ಸೋಂಕು, ಕೆಮ್ಮು, ಕಫ, ಹೊಟ್ಟೆ ನೋವು, ಹಲ್ಲುನೋವು, ಕಟ್ಟಿಕೊಳ್ಳುವ ಮೂಗು, ವಾಕರಿಕೆ ಮತ್ತು ವಾಂತಿ, ಪೌಷ್ಟಿಕಾಂಶದ ಕೊರತೆ, ಮೂರ್ಛೆರೋಗ, ಮಕ್ಕಳ ಬೆಳವಣಿಗೆಯ ಮೌಲ್ಯಮಾಪನ, ಜಾಂಡೀಸ್, ಸಾಮಾನ್ಯ ಪರೀಕ್ಷೆಗಳನ್ನು ನಡೆಸಲಾಗುವುದು. ಮಕ್ಕಳ ರೋಗ ತಜ್ಞರಾದ ಡಾ| ಪ್ರತೀತ್, ಡಾ| ನಿಖಿತಾ ಮಿರ್ಲೆ, ಡಾ| ಅರ್ಚನಾ ಕೆ.ಎಂ ಇವರು ಮಕ್ಕಳ ರೋಗ ತಪಾಸಣೆ ನಡೆಸಲಿದ್ದಾರೆ. ಹೆಸರು ನೊಂದಾಯಿಸಿಕೊಳ್ಳಲು 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!