July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳ ರೋಗ ತಪಾಸಣೆ ಉಚಿತವಾಗಿ ನಡೆಸಲಾಗುವುದು.


ಅಸ್ತಮ, ಉಬ್ಬಸ ಅತಿಸಾರ (ಅತಿಭೇದಿ), ಮಲಬದ್ಧತೆ, ಜ್ವರ, ಅಲರ್ಜಿ, ರ‍್ಯಾಶಸ್ (ದದ್ದುಗಳು), ಚರ್ಮದ ಸೋಂಕು, ಕೆಮ್ಮು, ಕಫ, ಹೊಟ್ಟೆ ನೋವು, ಹಲ್ಲುನೋವು, ಕಟ್ಟಿಕೊಳ್ಳುವ ಮೂಗು, ವಾಕರಿಕೆ ಮತ್ತು ವಾಂತಿ, ಪೌಷ್ಟಿಕಾಂಶದ ಕೊರತೆ, ಮೂರ್ಛೆರೋಗ, ಮಕ್ಕಳ ಬೆಳವಣಿಗೆಯ ಮೌಲ್ಯಮಾಪನ, ಜಾಂಡೀಸ್, ಸಾಮಾನ್ಯ ಪರೀಕ್ಷೆಗಳನ್ನು ನಡೆಸಲಾಗುವುದು. ಮಕ್ಕಳ ರೋಗ ತಜ್ಞರಾದ ಡಾ| ಪ್ರತೀತ್, ಡಾ| ನಿಖಿತಾ ಮಿರ್ಲೆ, ಡಾ| ಅರ್ಚನಾ ಕೆ.ಎಂ ಇವರು ಮಕ್ಕಳ ರೋಗ ತಪಾಸಣೆ ನಡೆಸಲಿದ್ದಾರೆ. ಹೆಸರು ನೊಂದಾಯಿಸಿಕೊಳ್ಳಲು 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya
error: Content is protected !!