25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳ ರೋಗ ತಪಾಸಣೆ ಉಚಿತವಾಗಿ ನಡೆಸಲಾಗುವುದು.


ಅಸ್ತಮ, ಉಬ್ಬಸ ಅತಿಸಾರ (ಅತಿಭೇದಿ), ಮಲಬದ್ಧತೆ, ಜ್ವರ, ಅಲರ್ಜಿ, ರ‍್ಯಾಶಸ್ (ದದ್ದುಗಳು), ಚರ್ಮದ ಸೋಂಕು, ಕೆಮ್ಮು, ಕಫ, ಹೊಟ್ಟೆ ನೋವು, ಹಲ್ಲುನೋವು, ಕಟ್ಟಿಕೊಳ್ಳುವ ಮೂಗು, ವಾಕರಿಕೆ ಮತ್ತು ವಾಂತಿ, ಪೌಷ್ಟಿಕಾಂಶದ ಕೊರತೆ, ಮೂರ್ಛೆರೋಗ, ಮಕ್ಕಳ ಬೆಳವಣಿಗೆಯ ಮೌಲ್ಯಮಾಪನ, ಜಾಂಡೀಸ್, ಸಾಮಾನ್ಯ ಪರೀಕ್ಷೆಗಳನ್ನು ನಡೆಸಲಾಗುವುದು. ಮಕ್ಕಳ ರೋಗ ತಜ್ಞರಾದ ಡಾ| ಪ್ರತೀತ್, ಡಾ| ನಿಖಿತಾ ಮಿರ್ಲೆ, ಡಾ| ಅರ್ಚನಾ ಕೆ.ಎಂ ಇವರು ಮಕ್ಕಳ ರೋಗ ತಪಾಸಣೆ ನಡೆಸಲಿದ್ದಾರೆ. ಹೆಸರು ನೊಂದಾಯಿಸಿಕೊಳ್ಳಲು 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!