25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

ಬೆಳ್ತಂಗಡಿ: ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಪ್ರಥಮ ಡಿ.ವೈ.ಎಸ್.ಪಿ ಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ.ಎಸ್.ಪಿ ರೋಹಿಣಿ ಸಿ.ಕೆ.ಯವರನ್ನು ಅವರ ಕಛೇರಿಯಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುರಕ್ಷತೆಗೆ ಸಂಬಂಧಪಟ್ಟ ವಿಚಾರಗಳನ್ನು ಹಾಗೂ ಬೆಳ್ತಂಗಡಿ ಪಟ್ಟಣದ ಕೆಲವು ಜಂಕ್ಷನ್ ಗಳಲ್ಲಿ ಸಿ ಸಿ ಕ್ಯಾಮರಾ ಅಳವಡಿಸುವ ಬಗ್ಗೆ ಅವರ ಗಮನಕ್ಕೆ ತರಲಾಯಿತು.

ಡಿ.ವೈ.ಎಸ್ಪಿ ಯವರು ಕಾನೂನು ಹಾಗೂ ಸುರಕ್ಷಾ ದೃಷ್ಟಿಯಲ್ಲಿ ತಮ್ಮ ಕರ್ತವ್ಯದಲ್ಲಿ ಉತ್ತಮವಾದ ಕೆಲಸ ಮಾಡುವ ಉದ್ದೇಶದಿಂದ ನಿಮ್ಮ ತಾಲೂಕಿಗೆ ಬಂದಿದ್ದೇನೆ. ನೀವೆಲ್ಲರೂ ಬಂದು ನನಗೆ ಭೇಟಿಯಾಗಿ ಶುಭ ಹಾರೈಸುವಾಗ ತುಂಬಾ ಸಂತೋಷ ವಾಗುತ್ತದೆ ಹಾಗೂ ನಿಮ್ಮೆಲ್ಲರ ಸಹಕಾರ ಕೋರುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ, ಉಪಾಧ್ಯಕ್ಷರು ಶಶಿಧರ್ ಪೈ, ಜತೆ ಕಾರ್ಯದರ್ಶಿ ಯಶವಂತ್ ಪಟವರ್ದನ್ ಕಾರ್ಯಕಾರಿ ಸಮಿತಿ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಶೀತಲ್ ಜೈನ್, ಶರ್ಮಿಳಾ ಮೋರಸ್, ಶಾo ಬಾವಿ ಬಂಗೇರ ,ವಿಲ್ಸನ್ ಗೊನ್ಸಲ್ವಿಸ್, ವಿನ್ಸo ಟ್ ಡಿಸೋಜಾ ಉಪಸ್ಥಿತರಿದ್ದರು.

Related posts

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya
error: Content is protected !!