September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

ಬೆಳ್ತಂಗಡಿ: ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಪ್ರಥಮ ಡಿ.ವೈ.ಎಸ್.ಪಿ ಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ.ಎಸ್.ಪಿ ರೋಹಿಣಿ ಸಿ.ಕೆ.ಯವರನ್ನು ಅವರ ಕಛೇರಿಯಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುರಕ್ಷತೆಗೆ ಸಂಬಂಧಪಟ್ಟ ವಿಚಾರಗಳನ್ನು ಹಾಗೂ ಬೆಳ್ತಂಗಡಿ ಪಟ್ಟಣದ ಕೆಲವು ಜಂಕ್ಷನ್ ಗಳಲ್ಲಿ ಸಿ ಸಿ ಕ್ಯಾಮರಾ ಅಳವಡಿಸುವ ಬಗ್ಗೆ ಅವರ ಗಮನಕ್ಕೆ ತರಲಾಯಿತು.

ಡಿ.ವೈ.ಎಸ್ಪಿ ಯವರು ಕಾನೂನು ಹಾಗೂ ಸುರಕ್ಷಾ ದೃಷ್ಟಿಯಲ್ಲಿ ತಮ್ಮ ಕರ್ತವ್ಯದಲ್ಲಿ ಉತ್ತಮವಾದ ಕೆಲಸ ಮಾಡುವ ಉದ್ದೇಶದಿಂದ ನಿಮ್ಮ ತಾಲೂಕಿಗೆ ಬಂದಿದ್ದೇನೆ. ನೀವೆಲ್ಲರೂ ಬಂದು ನನಗೆ ಭೇಟಿಯಾಗಿ ಶುಭ ಹಾರೈಸುವಾಗ ತುಂಬಾ ಸಂತೋಷ ವಾಗುತ್ತದೆ ಹಾಗೂ ನಿಮ್ಮೆಲ್ಲರ ಸಹಕಾರ ಕೋರುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ, ಉಪಾಧ್ಯಕ್ಷರು ಶಶಿಧರ್ ಪೈ, ಜತೆ ಕಾರ್ಯದರ್ಶಿ ಯಶವಂತ್ ಪಟವರ್ದನ್ ಕಾರ್ಯಕಾರಿ ಸಮಿತಿ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಶೀತಲ್ ಜೈನ್, ಶರ್ಮಿಳಾ ಮೋರಸ್, ಶಾo ಬಾವಿ ಬಂಗೇರ ,ವಿಲ್ಸನ್ ಗೊನ್ಸಲ್ವಿಸ್, ವಿನ್ಸo ಟ್ ಡಿಸೋಜಾ ಉಪಸ್ಥಿತರಿದ್ದರು.

Related posts

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಂದ ಮೊದಲ ದಿನವೇ 6 ಮೆಗಾ ಗ್ಯಾರಂಟಿ: ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್- ಯುವ ಜನರಿಗೆ ಉದ್ಯೋಗ ಗ್ಯಾರಂಟಿ- ಜೋಡೋ ಯುವ ಸಂಘ ರಚನೆ

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ಸದಸ್ಯರಿಗೆ ಸುರಕ್ಷಾ ಕಾರ್ಡ್ ವಿತರಣೆ

Suddi Udaya
error: Content is protected !!