July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

ಬೆಳ್ತಂಗಡಿ: ಉಜಿರೆಯ ರಸ್ತೆಯ ಬದಿ ನಿಲ್ಲಿಸಿ ಹೋಗಿದ್ದ ಸ್ಕೂಟರ್ ನ್ನು ಯಾರೋ ಕಳ್ಳರು ಕಳವು ಮಾಡಿದ್ದು ಈ ಬಗ್ಗೆ ನ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಾಲು ಗ್ರಾಮದ ದೊಂಪದಪಲ್ಕೆ ನಿವಾಸಿ ಧರ್ಮಪಾಲ್‌ ಜೈನ್‌ ಬಿ ಸಿ ರವರ ದೂರಿನಂತೆ ಧರ್ಮಪಾಲ್‌ ರವರು ನ.12 ರಂದು ತರಕಾರಿ ತರಲೆಂದು ಕೆಎ70ಜೆ1169 ನೇ ಹೊಂಡಾ ಆಕ್ಟೀವಾ ಸ್ಕೂಟರ್‌ ನ್ನು ಬೆಳಗ್ಗೆ ಉಜಿರೆಯ ಬಳಿ ತರಕಾರಿ ಅಂಗಡಿಯ ಎದುರಗಡೆ ನಿಲ್ಲಿಸಿ ತರಕಾರಿ ಖರೀದಿಸಿ ವಾಪಾಸು ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಸ್ಕೂಟರ್‌ ಇಲ್ಲದೆ ಹುಡುಕಾಡಿದರೂ ಸಿಗದೆ ಇದ್ದು ಕಾಣೆಯಾಗಿದೆ. ಕಳೆದು ಹೋದ ಸ್ಕೂಟರ್‌ ನ ಅಂದಾಜು ಮೌಲ್ಯ ರೂ 60000 ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ 134/2025 ಕಲಂ 303(2) ಬಿ ಎನ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘ ವತಿಯಿಂದ ಸಂಘದ ರೈತ ಸದಸ್ಯರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

Suddi Udaya

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya
error: Content is protected !!