ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

ಬೆಳ್ತಂಗಡಿ: ಉಜಿರೆಯ ರಸ್ತೆಯ ಬದಿ ನಿಲ್ಲಿಸಿ ಹೋಗಿದ್ದ ಸ್ಕೂಟರ್ ನ್ನು ಯಾರೋ ಕಳ್ಳರು ಕಳವು ಮಾಡಿದ್ದು ಈ ಬಗ್ಗೆ ನ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಾಲು ಗ್ರಾಮದ ದೊಂಪದಪಲ್ಕೆ ನಿವಾಸಿ ಧರ್ಮಪಾಲ್‌ ಜೈನ್‌ ಬಿ ಸಿ ರವರ ದೂರಿನಂತೆ ಧರ್ಮಪಾಲ್‌ ರವರು ನ.12 ರಂದು ತರಕಾರಿ ತರಲೆಂದು ಕೆಎ70ಜೆ1169 ನೇ ಹೊಂಡಾ ಆಕ್ಟೀವಾ ಸ್ಕೂಟರ್‌ ನ್ನು ಬೆಳಗ್ಗೆ ಉಜಿರೆಯ ಬಳಿ ತರಕಾರಿ ಅಂಗಡಿಯ ಎದುರಗಡೆ ನಿಲ್ಲಿಸಿ ತರಕಾರಿ ಖರೀದಿಸಿ ವಾಪಾಸು ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಸ್ಕೂಟರ್‌ ಇಲ್ಲದೆ ಹುಡುಕಾಡಿದರೂ ಸಿಗದೆ ಇದ್ದು ಕಾಣೆಯಾಗಿದೆ. ಕಳೆದು ಹೋದ ಸ್ಕೂಟರ್‌ ನ ಅಂದಾಜು ಮೌಲ್ಯ ರೂ 60000 ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ 134/2025 ಕಲಂ 303(2) ಬಿ ಎನ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya
error: Content is protected !!