September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳ ರೋಗ ತಪಾಸಣೆ ಉಚಿತವಾಗಿ ನಡೆಸಲಾಗುವುದು.


ಅಸ್ತಮ, ಉಬ್ಬಸ ಅತಿಸಾರ (ಅತಿಭೇದಿ), ಮಲಬದ್ಧತೆ, ಜ್ವರ, ಅಲರ್ಜಿ, ರ‍್ಯಾಶಸ್ (ದದ್ದುಗಳು), ಚರ್ಮದ ಸೋಂಕು, ಕೆಮ್ಮು, ಕಫ, ಹೊಟ್ಟೆ ನೋವು, ಹಲ್ಲುನೋವು, ಕಟ್ಟಿಕೊಳ್ಳುವ ಮೂಗು, ವಾಕರಿಕೆ ಮತ್ತು ವಾಂತಿ, ಪೌಷ್ಟಿಕಾಂಶದ ಕೊರತೆ, ಮೂರ್ಛೆರೋಗ, ಮಕ್ಕಳ ಬೆಳವಣಿಗೆಯ ಮೌಲ್ಯಮಾಪನ, ಜಾಂಡೀಸ್, ಸಾಮಾನ್ಯ ಪರೀಕ್ಷೆಗಳನ್ನು ನಡೆಸಲಾಗುವುದು. ಮಕ್ಕಳ ರೋಗ ತಜ್ಞರಾದ ಡಾ| ಪ್ರತೀತ್, ಡಾ| ನಿಖಿತಾ ಮಿರ್ಲೆ, ಡಾ| ಅರ್ಚನಾ ಕೆ.ಎಂ ಇವರು ಮಕ್ಕಳ ರೋಗ ತಪಾಸಣೆ ನಡೆಸಲಿದ್ದಾರೆ. ಹೆಸರು ನೊಂದಾಯಿಸಿಕೊಳ್ಳಲು 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿಯೋಗದಿಂದ ರಕ್ಷಿತ್ ಶಿವರಾಮ್ ಭೇಟಿ: ಕೋಳಿ ಸಾಕಾಣಿಕೆದಾರರ ಸಂಕಷ್ಟಕ್ಕೆ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರದ ಭರವಸೆ ನೀಡಿದ ರಕ್ಷಿತ್ ಶಿವರಾಮ್

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!