38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೆಳ್ತಂಗಡಿ: ವಿದ್ಯಾರ್ಥಿಗಳು ಅಂಕಗಳಿಸುವುದರೊಂದಿಗೆ ಪ್ರತಿಭಾನ್ವಿತರೂ ಆಗಿದ್ದಾಗ ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ್ ಪ್ರಭು ಹೇಳಿದರು. ‌

ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಾಧಕರನ್ನು ಅಭಿನಂದಿಸುವ ‘ಅಭಿನಂದನಂ’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಆತ್ಮವಿಶ್ವಾಸ ಮತ್ತು ನಾಯಕತ್ವವನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಪಾಲ್ಗೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆ ಯ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಉಪಸ್ಥಿತರಿದ್ದರು. ‌ ಉಪನ್ಯಾಸಕ ಶಂಕರ್ ರಾವ್ ಸ್ವಾಗತಿಸಿದರು. ಹರ್ಷಿತ್ ಕುಮಾರ್ ಧನ್ಯವಾದವಿತ್ತರು. ಸುಧೀರ್ ಕೆ ಎನ್ ನಿರೂಪಿಸಿದರು.

Related posts

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya
error: Content is protected !!