25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ .ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ರವರು ವಹಿಸಿಕೊಂಡು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಭ್ಯಾಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಶಿಲ್ಪಾ ಹಾಗೂ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಮತ್ತು ಕಾರ್ಯಕ್ರಮದ ಸಂಯೋಜಕರು , ಅಭ್ಯಾಸ್ ಪಿ .ಯು ಕಾಲೇಜಿನ ಉಪಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಹಾಗೂ ಪ್ರಭಾರ ಪ್ರಾಂಶುಪಾಲರಾದ ಗುರುಪ್ರಸಾದ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಈ ಶುಭ ಸಂದರ್ಭದಲ್ಲಿ ಕನಕದಾಸ ಜಯಂತಿಯು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಗೌರವಿಸಲು , ಸಾಮಾಜಿಕ ಸಮಾನತೆಯನ್ನು ಎತ್ತಿ ಹಿಡಿಯಲು , ನಮ್ಮ ಜೀವನಕ್ಕೆ ದಾರಿದೀಪವಾಗಬಲ್ಲ ದಾಸ ಸಾಹಿತ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಕೀರ್ತನೆ ಮತ್ತು ತತ್ವಪದಗಳು ಸಮಾಜಕ್ಕೆ ನೀಡಿದ ಸಂದೇಶ ಇಂದಿಗೂ ದಾರಿದೀಪವಾಗಿದೆ ಎಂಬ ವಿಚಾರಗಳನ್ನ ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ಸಂಸ್ಥೆಯ ಕಾರ್ಯದರ್ಶಿ ಗಳಾದ ಶ್ರೀಮತಿ. ಶಿಲ್ಪಾ ಅವರು ದಾಸ ಕೀರ್ತನೆಗಳು ಅಧ್ಯಾತ್ಮ ಮತ್ತು ಮಾನವೀಯತೆಯ ಸಂದೇಶವನ್ನು ಸಾರುತ್ತದೆ, ಇದು ಕೇವಲ ಆಚರಣೆಯ ದಿನವಾಗಿರದೆ ನಮ್ಮ ನಾಡಿನ ಭಕ್ತಿ, ಶಾಂತಿ, ಸಾಮಾಜಿಕ ಸಾಮರಸ್ಯ ಮುಂತಾದ ಮೌಲ್ಯಗಳನ್ನು ನೆನಪಿಸುವ ಮಹತ್ವದ ಕ್ಷಣಗಳಾಗಿವೆ ಎಂದು ಅಭಿಪ್ರಾಯ ಪಟ್ಟರು.

ಪಿ.ಆರ್.ಓ ಧನಂಜಯ ಹಾಗೂ ಎಲ್ಲಾ ಬೋಧಕೇತರ ಸಿಬ್ಬಂದಿ ವರ್ಗದವರೂ, ಸಹಾಯಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು . ವಿದ್ಯಾರ್ಥಿ ತನುಶ್ರೀ ಪ್ರಾರ್ಥನೆಗೈದರು, ಕನ್ನಡ ವಿಭಾಗದ ಉಪನ್ಯಾಸಕರಾದ ಸುಧೀರ್ ನಿರೂಪಿಸಿದರು, ನಿಲಯ ಪಾಲಕರಾದ ಜೀತೇಶ್ ಸ್ವಾಗತಿಸಿದರು.

Related posts

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya
error: Content is protected !!