July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

ಧರ್ಮಸ್ಥಳ: ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಲೋಕಾರ್ಪಣೆ ನ.13 ರಂದು ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗದ ಕಟ್ಟಡದ ಅಂಚೆ ಕಚೇರಿ ಬಳಿಯ ಮೊದಲನೇ ಮಹಡಿಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ,ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ ಮತ್ತು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರ ಶುಭ ಆಶೀರ್ವಾದದೊಂದಿಗೆ ನೂತನ ಶಾಖೆ ಉದ್ಘಾಟನೆಗೊಂಡಿತು.

ನೂತನ ಧರ್ಮಸ್ಥಳದ 20ನೇ ಶಾಖೆಯನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.

ಶಾಸಕ ಹರೀಶ್ ಪೂಂಜರವರು 2026 ನೇ ಸಾಲಿನ ವಿಜಯ ಕ್ರೆಡಿಟ್ ಸೊಸೈಟಿ ಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.

ವಿಜಯ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಅಜಿತ್ ಜಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್,ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೊಸೈಟಿ ಉಪಾಧ್ಯಕ್ಷ ಜಯಂತ ಶೆಟ್ಟಿ ಕೆ, ನಿರ್ದೇಶಕರಾದ ಎಸ್. ಜಯರಾಮ ಶೆಟ್ಟಿ, ಸೀತಾರಾಮ ಶೆಟ್ಟಿ ಬಿ.,ಬಾಲಕೃಷ್ಣ ಪೂಂಜ ಹೆಚ್.,ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ., ಕೃಷ್ಣ ರೈ ಟಿ.ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಪುರಂದರ ಶೆಟ್ಟಿ, ಮಂಜುನಾಥ ರೈ, ರಾಜು ಶೆಟ್ಟಿ ಬೆಂಗತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ ‘ನವಶಕ್ತಿ’, ಶ್ರೀಮತಿ ಸಾರಿಕ ಶೆಟ್ಟಿ, ಶ್ರೀಮತಿ ವಿಜಯ ಬಿ. ಶೆಟ್ಟಿ, ಪ್ರಾದೇಶಿಕ ಪ್ರಬಂಧಕರು, ಶಾಖಾ ಪ್ರಬಂಧಕರು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ನಿರ್ದೇಶಕ ಪ್ರಕಾಶ್ ಶೆಟ್ಟಿ ನೊಚ್ಚ ಸ್ವಾಗತಿಸಿದರು.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ವಂದಿಸಿದರು.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya
error: Content is protected !!