25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

ಬೆಳ್ತಂಗಡಿ: ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಟ್ಟದಬೈಲು, ಓಡಿಲ್ನಾಳ ಇದರ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಕಲ್ಲೋಟ್ಟು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ದೀಪಾ ಎಸ್ ಮೇಚೆರಿ ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಶಾಲೆಯ ಬಹು ಮುಖ್ಯ ಆಶೋತ್ತರಗಳ ಈಡೇರಿಕೆಗಾಗಿ ಶ್ರಮಿಸುತ್ತೇನೆಂದು ಭರವಸೆ ನೀಡಿದರು.

ಸರ್ಕಾರದ ಸುತ್ತೋಲೆಯಂತೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಟ್ಟದಬೈಲು ಇಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೋಷಕ ಶಿಕ್ಷಕರ ಮಹಾಸಭೆ ನಡೆಯಿತು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರಭಾರ ಮುಖ್ಯೋಪಾಧ್ಯಾಯಿನಿ ಶ್ರೀಮತಿ. ಶಾಂತಿ ಡಿಸೋಜ ಇವರು ನೀಡಿದರು. ನಿರೂಪಣೆಯನ್ನು ಆಂಗ್ಲ ಭಾಷಾ ಪದವೀಧರ ಶಿಕ್ಷಕರಾದ ಎಮ್.ವಿ ಹಿರೇಮಠ ಇವರು ಮಾಡಿದರು. ಮಕ್ಕಳ ಹಕ್ಕುಗಳ ಬಗ್ಗೆ ಪದವೀಧರ ಶಿಕ್ಷಕಿಯಾದ ಶ್ರೀಮತಿ ಭವ್ಯ ಇವರು ಪೋಷಕರಿಗೆ ಮಾಹಿತಿ ನೀಡಿದರು.

ವರ್ಗಾವಣೆಗೊಂಡ ಸಹ ಶಿಕ್ಷಕ ಪಿ ಶಿವಾನಂದ ಭಂಡಾರಿ, ಸಹ ಶಿಕ್ಷಕಿ ಶ್ರೀಮತಿ ಜಯಶ್ರೀ, ವಯೋ ನಿವೃತ್ತಿ ಹೊಂದಿದ ಅಡುಗೆ ಸಹಾಯಕಿ ಶ್ರೀಮತಿ ಡೀಕಮ್ಮ ಮತ್ತು ಮಾಜಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿದ್ದ ಶೇಖರ ಪೆಜತ್ತಕಾಡು ಇವರಿಗೆ ಶಾಲೆಯ ಪರವಾಗಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗೌರವ ಶಿಕ್ಷಕಿಯರಾದ ಶ್ರೀಮತಿ ಭಾಗೀರಥಿ, ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ಜಯಶ್ರೀ ಇವರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya
error: Content is protected !!