July 23, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

ಬೆಳ್ತಂಗಡಿ: ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಟ್ಟದಬೈಲು, ಓಡಿಲ್ನಾಳ ಇದರ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಕಲ್ಲೋಟ್ಟು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ದೀಪಾ ಎಸ್ ಮೇಚೆರಿ ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಶಾಲೆಯ ಬಹು ಮುಖ್ಯ ಆಶೋತ್ತರಗಳ ಈಡೇರಿಕೆಗಾಗಿ ಶ್ರಮಿಸುತ್ತೇನೆಂದು ಭರವಸೆ ನೀಡಿದರು.

ಸರ್ಕಾರದ ಸುತ್ತೋಲೆಯಂತೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಟ್ಟದಬೈಲು ಇಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೋಷಕ ಶಿಕ್ಷಕರ ಮಹಾಸಭೆ ನಡೆಯಿತು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರಭಾರ ಮುಖ್ಯೋಪಾಧ್ಯಾಯಿನಿ ಶ್ರೀಮತಿ. ಶಾಂತಿ ಡಿಸೋಜ ಇವರು ನೀಡಿದರು. ನಿರೂಪಣೆಯನ್ನು ಆಂಗ್ಲ ಭಾಷಾ ಪದವೀಧರ ಶಿಕ್ಷಕರಾದ ಎಮ್.ವಿ ಹಿರೇಮಠ ಇವರು ಮಾಡಿದರು. ಮಕ್ಕಳ ಹಕ್ಕುಗಳ ಬಗ್ಗೆ ಪದವೀಧರ ಶಿಕ್ಷಕಿಯಾದ ಶ್ರೀಮತಿ ಭವ್ಯ ಇವರು ಪೋಷಕರಿಗೆ ಮಾಹಿತಿ ನೀಡಿದರು.

ವರ್ಗಾವಣೆಗೊಂಡ ಸಹ ಶಿಕ್ಷಕ ಪಿ ಶಿವಾನಂದ ಭಂಡಾರಿ, ಸಹ ಶಿಕ್ಷಕಿ ಶ್ರೀಮತಿ ಜಯಶ್ರೀ, ವಯೋ ನಿವೃತ್ತಿ ಹೊಂದಿದ ಅಡುಗೆ ಸಹಾಯಕಿ ಶ್ರೀಮತಿ ಡೀಕಮ್ಮ ಮತ್ತು ಮಾಜಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿದ್ದ ಶೇಖರ ಪೆಜತ್ತಕಾಡು ಇವರಿಗೆ ಶಾಲೆಯ ಪರವಾಗಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗೌರವ ಶಿಕ್ಷಕಿಯರಾದ ಶ್ರೀಮತಿ ಭಾಗೀರಥಿ, ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ಜಯಶ್ರೀ ಇವರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ನಡುಜಾರು ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!