ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

ಬೆಳ್ತಂಗಡಿ : ನಾವೂರು ಗ್ರಾಮದಲ್ಲಿ ಹೊಡಿಕ್ಕಾರು ಸಂಪರ್ಕ ರಸ್ತೆಯ ತೀರಾ ಹದಗೆಟ್ಟಿದ್ದು ಕಾಮಗಾರಿಯ ಕೆಲಸವು ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡು ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರ್ಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಜಲ್ಲಿ ಹಾಕಿದ ರಸ್ತೆಯ ಬಳಿ ಪರ್ಯಾಯ ರಸ್ತೆ ನಿರ್ಮಾಣ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಊರಿನ ಜನರೇ ಹಣ ಸಂಗ್ರಹಿಸಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

Suddi Udaya

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya
error: Content is protected !!