ನ್ಯಾಯತರ್ಪು: ರಕ್ತೇಶ್ವರಿಪದವು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ-ಶಿಕ್ಷಕರ ಮಹಾಸಭೆ ಹಮ್ಮಿಕೊಳ್ಳಲಾಯಿತು.
ಎಸ್ಡಿಎಂಸಿ ಅಧ್ಯಕ್ಷ ಕೆ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳಿಗೆ ಮತ್ತು ಪೋಷಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ಲಕ್ಷ್ಮಣ ಗೌಡ ಇವರ ಪ್ರಾಯೋಜಕತ್ವದಲ್ಲಿ ಬಹುಮಾನ ವಿತರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ, ಮಾಜಿ ಅಧ್ಯಕ್ಷ ಯಾದವ ಗೌಡ, ರಕ್ತೇಶ್ವರಿಪದವು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುನೀತಾ, ಆಶಾ ಕಾರ್ಯಕರ್ತೆ ಶ್ರೀಮತಿ ಶಶಿಕಲಾ, ಶಾಲಾ ನಾಯಕಿ ಆಧ್ಯಾ ಕೆ, ಉಪನಾಯಕಿ ಗೌತಮಿ, ಸದಸ್ಯರು, ಪೋಷಕರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಮುಖ್ಯಶಿಕ್ಷಕಿ ಚೈತ್ರಪ್ರಭಾ ಪ್ರಾಸ್ತಾವಿಸಿ, ಸ್ವಾಗತಿಸಿ, ಮಕ್ಕಳ ದಿನಾಚರಣೆ ಮಹತ್ವ ತಿಳಿಸಿದರು. ಸಹಶಿಕ್ಷಕಿ ಲಾವಣ್ಯ ನಿರೂಪಿಸಿ, ವಂದಿಸಿದರು.











