July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

ನ್ಯಾಯತರ್ಪು: ರಕ್ತೇಶ್ವರಿಪದವು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ-ಶಿಕ್ಷಕರ ಮಹಾಸಭೆ ಹಮ್ಮಿಕೊಳ್ಳಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಕೆ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳಿಗೆ ಮತ್ತು ಪೋಷಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ಲಕ್ಷ್ಮಣ ಗೌಡ ಇವರ ಪ್ರಾಯೋಜಕತ್ವದಲ್ಲಿ ಬಹುಮಾನ ವಿತರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ, ಮಾಜಿ ಅಧ್ಯಕ್ಷ ಯಾದವ ಗೌಡ, ರಕ್ತೇಶ್ವರಿಪದವು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುನೀತಾ, ಆಶಾ ಕಾರ್ಯಕರ್ತೆ ಶ್ರೀಮತಿ ಶಶಿಕಲಾ, ಶಾಲಾ ನಾಯಕಿ ಆಧ್ಯಾ ಕೆ, ಉಪನಾಯಕಿ ಗೌತಮಿ, ಸದಸ್ಯರು, ಪೋಷಕರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಮುಖ್ಯಶಿಕ್ಷಕಿ ಚೈತ್ರಪ್ರಭಾ ಪ್ರಾಸ್ತಾವಿಸಿ, ಸ್ವಾಗತಿಸಿ, ಮಕ್ಕಳ ದಿನಾಚರಣೆ ಮಹತ್ವ ತಿಳಿಸಿದರು. ಸಹಶಿಕ್ಷಕಿ ಲಾವಣ್ಯ ನಿರೂಪಿಸಿ, ವಂದಿಸಿದರು.

Related posts

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!