23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕ ಶೀನಪ್ಪ ಗೌಡ ವಹಿಸಿ, ಮಕ್ಕಳ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಮುಖ್ಯ ಅತಿಥಿ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕ ದಿವಾಕರ ಗೌಡ ಮುಚ್ಚಾರು ಮಾತನಾಡಿ ಮಕ್ಕಳ ದಿನಾಚರಣೆ ಎಂದರೆ ಮಕ್ಕಳಿಗೆ ಒಂದು ಸಂತೋಷದ ದಿನ ಈ ದಿನವನ್ನು ಎಲ್ಲಾ ವಿದ್ಯಾರ್ಥಿಗಳು ಸಂತೋಷದಿಂದ ಕಳೆಯಬೇಕು ಎಂದು ಅಭಿಪ್ರಾಯಪಟ್ಟರು.

ಶಿಕ್ಷಕ ಗೌರೀಶ್ ಇವರು ಮಕ್ಕಳ ದಿನಾಚರಣೆಯ ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಆಯೋಜಿಸಲಾಗಿದ್ದ ಗೂಡುದೀಪ ಸ್ಪರ್ಧೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕರಾದ ನಿಶಾಂತ್ ಕುಮಾರ್ ಸ್ವಾಗತಿಸಿ, ಕುಮಾರಿ ಜಿತಿಕ್ಷ ವಂದಿಸಿ, ಶೀಲಾ ಎನ್ ರವರು ನಿರೂಪಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಪುಷ್ಪಲತಾ ನೆರವೇರಿಸಿದರು.

Related posts

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya
error: Content is protected !!