ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕ ಶೀನಪ್ಪ ಗೌಡ ವಹಿಸಿ, ಮಕ್ಕಳ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಮುಖ್ಯ ಅತಿಥಿ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕ ದಿವಾಕರ ಗೌಡ ಮುಚ್ಚಾರು ಮಾತನಾಡಿ ಮಕ್ಕಳ ದಿನಾಚರಣೆ ಎಂದರೆ ಮಕ್ಕಳಿಗೆ ಒಂದು ಸಂತೋಷದ ದಿನ ಈ ದಿನವನ್ನು ಎಲ್ಲಾ ವಿದ್ಯಾರ್ಥಿಗಳು ಸಂತೋಷದಿಂದ ಕಳೆಯಬೇಕು ಎಂದು ಅಭಿಪ್ರಾಯಪಟ್ಟರು.

ಶಿಕ್ಷಕ ಗೌರೀಶ್ ಇವರು ಮಕ್ಕಳ ದಿನಾಚರಣೆಯ ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಆಯೋಜಿಸಲಾಗಿದ್ದ ಗೂಡುದೀಪ ಸ್ಪರ್ಧೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕರಾದ ನಿಶಾಂತ್ ಕುಮಾರ್ ಸ್ವಾಗತಿಸಿ, ಕುಮಾರಿ ಜಿತಿಕ್ಷ ವಂದಿಸಿ, ಶೀಲಾ ಎನ್ ರವರು ನಿರೂಪಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಪುಷ್ಪಲತಾ ನೆರವೇರಿಸಿದರು.

Related posts

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!