25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

ಬೆಳ್ತಂಗಡಿ: ದ.ಕ. ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಆರಂಬೋಡಿಯ ಪ್ರತಾಪ್ ಶೆಟ್ಟಿ ಕುಂಡಾಜೆಯವರಿಗೆ “ಕ್ಷೀರಾರತ್ನ” ಪ್ರಶಸ್ತಿ ನೀಡಿ ಗೌರವಿಸಿದೆ.

ಪ್ರತಾಪ್ ಶೆಟ್ಟಿ ಕುಂಡಾಜೆಯವರು ಪ್ರಸ್ತುತ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದು, ಆರಂಬೋಡಿ ಗ್ರಾಮದ ಕುಂಡಾಜೆ ಶ್ರೀಮತಿ ಸುನಂದಾ ಮತ್ತು ಸಂಜೀವ ಶೆಟ್ಟಿ ದಂಪತಿ ಪುತ್ರ.

ಇವರು ಆಟೋಮೋಬೈಲ್ ವೃತ್ತಿ ಶಿಕ್ಷಣ ಪಡೆದಿದ್ದು, ಬೆಂಗಳೂರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅದನ್ನು ತ್ಯಜಿಸಿ ತನ್ನ ಊರಿಗೆ ಮರಳಿ ಕೃಷಿ ಮತ್ತು ಹೈನುಗಾರಿಕೆಯನ್ನು ಪ್ರಾರಂಭಿಸಿ ಪ್ರಸ್ತುತ ಪ್ರತಿ ದಿನಾ ಸರಾಸರಿ 100 ಲೀಟರ್‌ಗಿಂತಲು ಅಧಿಕ ಹಾಲನ್ನು ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಪೂರೈಸುತ್ತಿದ್ದಾರೆ.

ಸುಮಾರು 15 ಉತ್ತಮ ಜಾತಿಯ ತಳಿಗಳನ್ನು ಸಾಕುತ್ತಿರುವ ಇವರು ಹೈನುಗಾರಿಕೆಯೊಂದಿಗೆ ಅಡಿಕೆ ಕೃಷಿ, ತೆಂಗು ಕೃಷಿಯನ್ನು ಮಾಡುತ್ತಿದ್ದೂ ಉಳಿದ ಯುವಕರಿಗೆ ಪ್ರತಾಪ್ ಶೆಟ್ಟಿ ಪ್ರೇರಣೆಯಾಗಿದ್ದಾರೆ. ಇವರಿಗೆ ಬೆಂಬಲವಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ನಿರ್ದೇಶಕರುಗಳು ಸಾಥ್ ನೀಡುತ್ತಿದ್ದಾರೆ

Related posts

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya
error: Content is protected !!