September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

ಬೆಳ್ತಂಗಡಿ: ದ.ಕ. ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಆರಂಬೋಡಿಯ ಪ್ರತಾಪ್ ಶೆಟ್ಟಿ ಕುಂಡಾಜೆಯವರಿಗೆ “ಕ್ಷೀರಾರತ್ನ” ಪ್ರಶಸ್ತಿ ನೀಡಿ ಗೌರವಿಸಿದೆ.

ಪ್ರತಾಪ್ ಶೆಟ್ಟಿ ಕುಂಡಾಜೆಯವರು ಪ್ರಸ್ತುತ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದು, ಆರಂಬೋಡಿ ಗ್ರಾಮದ ಕುಂಡಾಜೆ ಶ್ರೀಮತಿ ಸುನಂದಾ ಮತ್ತು ಸಂಜೀವ ಶೆಟ್ಟಿ ದಂಪತಿ ಪುತ್ರ.

ಇವರು ಆಟೋಮೋಬೈಲ್ ವೃತ್ತಿ ಶಿಕ್ಷಣ ಪಡೆದಿದ್ದು, ಬೆಂಗಳೂರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅದನ್ನು ತ್ಯಜಿಸಿ ತನ್ನ ಊರಿಗೆ ಮರಳಿ ಕೃಷಿ ಮತ್ತು ಹೈನುಗಾರಿಕೆಯನ್ನು ಪ್ರಾರಂಭಿಸಿ ಪ್ರಸ್ತುತ ಪ್ರತಿ ದಿನಾ ಸರಾಸರಿ 100 ಲೀಟರ್‌ಗಿಂತಲು ಅಧಿಕ ಹಾಲನ್ನು ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಪೂರೈಸುತ್ತಿದ್ದಾರೆ.

ಸುಮಾರು 15 ಉತ್ತಮ ಜಾತಿಯ ತಳಿಗಳನ್ನು ಸಾಕುತ್ತಿರುವ ಇವರು ಹೈನುಗಾರಿಕೆಯೊಂದಿಗೆ ಅಡಿಕೆ ಕೃಷಿ, ತೆಂಗು ಕೃಷಿಯನ್ನು ಮಾಡುತ್ತಿದ್ದೂ ಉಳಿದ ಯುವಕರಿಗೆ ಪ್ರತಾಪ್ ಶೆಟ್ಟಿ ಪ್ರೇರಣೆಯಾಗಿದ್ದಾರೆ. ಇವರಿಗೆ ಬೆಂಬಲವಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ನಿರ್ದೇಶಕರುಗಳು ಸಾಥ್ ನೀಡುತ್ತಿದ್ದಾರೆ

Related posts

ನಾವೂರು ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya
error: Content is protected !!