37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ, ಪ್ರಾಂಶುಪಾಲ ವಂ.ಫಾ ವಿಜಯ್ ಲೋಬೋ, ಶಾಲಾ ನಾಯಕಿಯರಾದ ಸಿಂಚನ ಮತ್ತು ಮಿಷೆಲ್ ಪಿಂಟೊ ಉಪಸ್ಥಿತರಿದ್ದರು.

ಮುಖ್ಯ ಅತಿಥಿ ಪ್ರಭಾತ ಸ್ಟೋರ್ ಮಾಲಕ ಪ್ರವೀಣ್ ಭಟ್ ಮಾತನಾಡಿ ಮಕ್ಕಳು ನಮ್ಮ ರಾಷ್ಟ್ರದ ಭವಿಷ್ಯ. ಅವರಲ್ಲಿ ಸೃಜನಶೀಲತೆ, ಮೌಲ್ಯಗಳು ಹಾಗೂ ಆತ್ಮವಿಶ್ವಾಸ ಬೆಳೆಸುವುದು ಶಾಲೆಯ ಹೊಣೆಗಾರಿಕೆ ಎಂದು ಹೇಳಿದರು.

ಶಾಲಾ ಸಂಚಾಲಕ ವಂ.ಫಾ. ಅಬೆಲ್ ಲೋಬೊ ಮಕ್ಕಳ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಿಂದ ಮಕ್ಕಳಿಗೆ ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಾಗಿದ್ದು, ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಸಹಶಿಕ್ಷಕಿಯರಾದ ಕೀರ್ತಿಕ ಸ್ವಾಗತಿಸಿ, ನಿಶಾ ನಿರೂಪಿಸಿ, ರಕ್ಷಾ ವಂದಿಸಿದರು.

Related posts

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya
error: Content is protected !!