22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ, ಪ್ರಾಂಶುಪಾಲ ವಂ.ಫಾ ವಿಜಯ್ ಲೋಬೋ, ಶಾಲಾ ನಾಯಕಿಯರಾದ ಸಿಂಚನ ಮತ್ತು ಮಿಷೆಲ್ ಪಿಂಟೊ ಉಪಸ್ಥಿತರಿದ್ದರು.

ಮುಖ್ಯ ಅತಿಥಿ ಪ್ರಭಾತ ಸ್ಟೋರ್ ಮಾಲಕ ಪ್ರವೀಣ್ ಭಟ್ ಮಾತನಾಡಿ ಮಕ್ಕಳು ನಮ್ಮ ರಾಷ್ಟ್ರದ ಭವಿಷ್ಯ. ಅವರಲ್ಲಿ ಸೃಜನಶೀಲತೆ, ಮೌಲ್ಯಗಳು ಹಾಗೂ ಆತ್ಮವಿಶ್ವಾಸ ಬೆಳೆಸುವುದು ಶಾಲೆಯ ಹೊಣೆಗಾರಿಕೆ ಎಂದು ಹೇಳಿದರು.

ಶಾಲಾ ಸಂಚಾಲಕ ವಂ.ಫಾ. ಅಬೆಲ್ ಲೋಬೊ ಮಕ್ಕಳ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಿಂದ ಮಕ್ಕಳಿಗೆ ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಾಗಿದ್ದು, ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಸಹಶಿಕ್ಷಕಿಯರಾದ ಕೀರ್ತಿಕ ಸ್ವಾಗತಿಸಿ, ನಿಶಾ ನಿರೂಪಿಸಿ, ರಕ್ಷಾ ವಂದಿಸಿದರು.

Related posts

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya
error: Content is protected !!